ಸಂಸದ ನಳಿನ್, ಸಚಿವ ಕೋಟ ಮನವಿ ಹಿನ್ನೆಲೆಯಲ್ಲಿ ಸರ್ಕಾರ ಆದೇಶ
ಎರಡು ತಿಂಗಳ ಪಡಿತರ ವಿತರಣೆಯನ್ನು ರಾಜ್ಯ ಸರಕಾರ ವಿತರಿಸುತ್ತಿದ್ದು, ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟಿಪಿಯ ಮೂಲಕ ಪಡಿತರ ವಿತರಣೆಯಾಗಲಿದ್ದು, ನ್ಯಾಯಬೆಲೆ ಅಂಗಡಿಯ ಆನ್ಲೈನ್ ವ್ಯವಸ್ಥೆಯಲ್ಲಿ ಕಾರ್ಡ್ ಸಂಖ್ಯೆ ನಮೂದಿಸಿದಾಗ ಅವರ ಆಧಾರ್ ಕಾರ್ಡ್ಗೆ ಮೊಬೈಲ್ ಲಿಂಕ್ ಆಗಿದ್ದರೆ, ಆ ಸಂಖ್ಯೆಗೆ ಒನ್ ಟೈಮ್ ಪಾಸ್ವರ್ಡ್(ಒಟಿಪಿ) ಬರಲಿದೆ. ಆದರೆ ವೈದ್ಯಕೀಯ ವಿಪತ್ತು ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳ ಪಡಿತರ ವಸ್ತುಗಳನ್ನು ಎಲ್ಲೆಲ್ಲಿ ಸ್ಥಳೀಯವಾಗಿ ವಿವಿಧ ಕಾರಣಗಳಿಂದ ಒ.ಟಿ.ಪಿ.ಯೊಂದಿಗೆ ಆಹಾರ ಧಾನ್ಯಗಳನ್ನು ಪಡೆಯಲು ತೊಂದರೆ ಇದೆಯೋ ಅಂಥ ಪ್ರದೇಶಗಳಲ್ಲಿ ಒ.ಟಿ.ಪಿ. ಇಲ್ಲದೆ ಆಹಾರ ಧಾನ್ಯ ಪೂರೈಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿ ಮೇರೆಗೆ ರಾಜ್ಯ ಸರಕಾರ ಈ ಆದೇಶ ಹೊರಡಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪಡಿತರ ವಿತರಣೆ: ಒಟಿಪಿ ಸಮಸ್ಯೆಯಾದರೂ ವಿತರಣೆಗೆ ಕ್ರಮ"
Be the first to comment on "ಪಡಿತರ ವಿತರಣೆ: ಒಟಿಪಿ ಸಮಸ್ಯೆಯಾದರೂ ವಿತರಣೆಗೆ ಕ್ರಮ"