ನಮಗೆ ರಕ್ಷಣೆ ನೀಡಿ, ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಿ: ಆಶಾ ಕಾರ್ಯಕರ್ತೆಯರ ಆಗ್ರಹ

ಕರೋನಾ ವೈರಸ್ ವಿರುದ್ಧ ನಮ್ಮ ಆರೋಗ್ಯದ ಬಗ್ಗೆಯೂ ಲೆಕ್ಕಿಸದೆ ಮನೆ ಮನೆಗೆ ತೆರಳುತ್ತಿರುವ ಸಂದರ್ಭ ದುಷ್ಕರ್ಮಿಗಳು ಹಲ್ಲೆ ನಡೆಸುತ್ತಿರುವುದು ಆತಂಕಕಾರಿ. ನಮಗೆ ರಕ್ಷಣೆ ನೀಡಿ, ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಭಾರತೀಯ ಆಶಾ ಕಾರ್ಯಕರ್ತೆಯರ ಸಂಘ (ಬಿಎಂಎಸ್ ಸಂಯೋಜಿತ) ರಾಷ್ಟ್ರೀಯ ಉಪಾಧ್ಯಕ್ಷೆ ಹಾಗೂ ರಾಜ್ಯ ಸಹಕಾರ್ಯದರ್ಶಿ ವಿಜಯಲಕ್ಷ್ಮೀ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ 48 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದೇವೆ. ಕರೋನಾ ವೈರಸ್ ವಿರುದ್ಧ ನಮ್ಮ ಆರೋಗ್ಯದ ಬಗ್ಗೆ ಲೆಕ್ಕಿಸದೆ ಕೆಲಸ ಮಾಡುತ್ತಿದ್ದು, ಹಗಲು ಬಿಸಿಲಿನ ಝಳವಿದ್ದರೂ ಅದರೊಂದಿಗೆ ಮನೆ ಮನೆಗೆ ಹೆಜ್ಜೆ ಹಾಕುತ್ತಿದ್ದೇವೆ. ಬೇರೆ ಬೇರೆ ಊರು, ವಿದೇಶ, ರಾಜ್ಯಗಳಿಂದ ಬಂದವರಿಗೆ ಸೂಚನೆ ನೀಡುವ ಕಾರ್ಯವನ್ನು ಇಲಾಖೆ ನಿರ್ದೇಶನದಂತೆ ಮಾಡುತ್ತಿದ್ದೇವೆ. ಆದರೆ ಯಾವುದೇ ಭದ್ರತೆ ನಮಗಿಲ್ಲ ಎಂದಿರುವ ಅವರು, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಯಾಗುತ್ತಿರುವುದು ಆತಂಕಕಾರಿ. ಕೆಲವೆಡೆ ಆರೋಗ್ಯ ರಕ್ಷಣೆ ಕುರಿತು ನಮ್ಮ ಸೂಚನೆಗಳಿಗೆ ಸಹಕಾರವನ್ನೂ ನೀಡುತ್ತಿಲ್ಲ ಎಂದಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದವರು ಎಚ್ಚರಿಸಿದ್ದಾರೆ. ಸರ್ಕಾರ ಗಂಭೀರವಾಗಿ ತೀರ್ಮಾನ ಕೈಗೊಂಡು, ಕಾರ್ಯಕರ್ತೆಯರಿಗೆ ಭದ್ರತೆ ಒದಗಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷೆ ಗಾಯತ್ರಿ, ರಾಜ್ಯ ಕಾರ್ಯದರ್ಶಿ ರೇವತಿ, ಸಹಕಾರ್ಯದರ್ಶಿ ವಿಜಯಲಕ್ಷ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಮಗೆ ರಕ್ಷಣೆ ನೀಡಿ, ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಿ: ಆಶಾ ಕಾರ್ಯಕರ್ತೆಯರ ಆಗ್ರಹ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*