ಕೋವಿಡ್ 19 ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಈಗಾಗಲೇ ಜಿಲ್ಲಾಡಳಿತ ವಿಧಿಸಿದ್ದು, ರೇಷನ್ ವಿತರಣೆಯೂ ಬಡವರಿಗೆ ಈ ಮಧ್ಯೆ ಕೊಡಲಾಗುತ್ತಿದೆ. ಆದರೆ ಏ.5ರ ಭಾನುವಾರ ಸಹಿತ ಏ.6, 7ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಸಿಂಧೂ ಡಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದು, ಎಂದಿನಂತೆಯೇ ಪಡಿತರ ವಿತರಿಸಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.