ಬಂಟ್ವಾಳ

ಅಧಿಕಾರಿಗಳು, ಆಶಾ ಕಾರ್ಯಕರ್ತೆಯರಿಗೆ ಸಹಕಾರ ನೀಡಿ: ಯು.ಟಿ.ಖಾದರ್ ಮನವಿ

ತುಂಬೆ ಗ್ರಾಮದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಮಾರು 500ಕ್ಕೂ ಅಧಿಕ ಮನೆಗಳನ್ನು ಕ್ವಾರಂಟೈನ್ ನಲ್ಲಿಡಲಾಗಿದ್ದು, ಗ್ರಾಮಸ್ಥರು ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಹಕಾರ ನೀಡಬೇಕು ಎಂದು ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಮನವಿ ಮಾಡಿದ್ದಾರೆ.

ಜಾಹೀರಾತು

ಸೋಂಕು ದೃಢಪಟ್ಟಿರುವುದು ಖಚಿತಗೊಳ್ಳುತ್ತಿದ್ದಂತೆ ತಹಶೀಲ್ದಾರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಎ. 5ರಿಂದ ಆಶಾ ಕಾರ್ಯಕರ್ತೆಯರು ಭೇಟಿ ನೀಡಲಿದ್ದು, ಅವರು ನಮ್ಮ ಆರೋಗ್ಯ ದೃಷ್ಟಿಯಿಂದ ಬರುತ್ತಾರೆ ಎಂಬುದನ್ನು ಮನಸ್ಸಿನಲ್ಲಿಟ್ಟು ಅವರಿಗೆ ತೊಂದರೆ ನೀಡದೆ ಸಹಕರಿಸಬೇಕು. ಸೋಂಕು ದೃಢಪಟ್ಟವರ ಜತೆ ಸಂಪರ್ಕದಲ್ಲಿದ್ದವರು ಸ್ವಯಂಪ್ರೇರಿತರಾಗಿ ಆರೋಗ್ಯ ಇಲಾಖೆಗೆ ಮಾಹಿತಿಯನ್ನು ನೀಡಬೇಕು. ಪ್ರಸ್ತುತ ಕ್ವಾರಂಟೈನ್ ನಲ್ಲಿರುವ ಮನೆಗಳಿಗೆ ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ.  ಗ್ರಾಮದ ಎಲ್ಲರೂ ಕೂಡ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಗ್ರಾಮಸ್ಥರ ಈಗಾಗಲೇ ಸಹಕಾರ ನೀಡುವ ಭರವಸೆಯನ್ನೂ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ