ಪ್ರಮುಖ ಸುದ್ದಿಗಳು

ಕೇರಳ ಆಂಬುಲೆನ್ಸ್ ಪ್ರವೇಶಕ್ಕೆ ಅವಕಾಶ – ಷರತ್ತುಗಳು ಅನ್ವಯ

ಕೇರಳ, ಕರ್ನಾಟಕದ ತಲಪಾಡಿ ಅಂತಾರಾಜ್ಯ ಗಡಿಯನ್ನು ಮಾತ್ರ ತುರ್ತುವೈದ್ಯಕೀಯ ಚಿಕಿತ್ಸೆಗಾಗಿ ಉಭಯ ರಾಜ್ಯಗಳ ಹಿರಿಯ ಅಧಿಕಾರಿಗಳು ರೂಪಿಸಿರುವ ಮಾನದಂಡ ಅನುಗುಣವಾಗಿ ತೆರೆಯಲು ಸರ್ವೋಚ್ಛ ನ್ಯಾಯಾಲಯ ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ತುರ್ತು ಜಿಲ್ಲಾ ಮಟ್ಟದ ಕೋವಿಡ್ ನಿಯಂತ್ರಣ ಸಭೆಯನ್ನು ಐ.ಎಂ.ಎ. ಸದಸ್ಯರೊಂದಿಗೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ಜಾಹೀರಾತು

ವೈದ್ಯಕೀಯ ಚಿಕಿತ್ಸೆಗೆ ಕೆಲವು ಮಾನದಂಡ ರೂಪಿಸಲಾಗಿದ್ದು, ಇಂತಿವೆ.

  • ಕೇವಲ ಅತ್ಯಂತ ತುರ್ತು ಚಿಕಿತ್ಸೆ, ರಸ್ತೆ ಅಪಘಾತಗಳ ಚಿಕಿತ್ಸೆಗೆ ಸರಕಾರಿ ಆಂಬುಲೆನ್ಸ್ ಗಳಲ್ಲಿ ರೋಗಿಯನ್ನು ಕರೆತರಲು ಅನುಮತಿ.
  • ಕಾಸರಗೋಡಿನ ಸ್ಥಳೀಯ ಸರಕಾರಿ ವೈದ್ಯಾಧಿಕಾರಿಯು ಚಿಕಿತ್ಸೆಗೆ ಬರುವ ರೋಗಿಯು ನಾನ್ ಕೋವಿಡ್ ಎಂದು ಮತ್ತು ಚಿಕಿತ್ಸೆಯು ಕಾಸರಗೋಡಿನಲ್ಲಿ ಲಭ್ಯವಿಲ್ಲವೆಂದು ದೃಢೀಕರಿಸಿ ಸಲ್ಲಿಸಬೇಕು.
  • ರೋಗಿಯನ್ನು ಕರೆತರುವ ಆಂಬುಲೆನ್ಸ್ ಗಳನ್ನು ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯ ನಿರ್ದೇಶನದಂತೆ ಸ್ಯಾನಿಟೈಸ್ ಮಾಡಬೇಕು.
  • ರೋಗಿಯೊಂದಿಗೆ ಕೇವಲ ಒಬ್ಬ ಸಹಾಯಕ, ಆಂಬುಲೆನ್ಸ್ ಚಾಲಕ ಮತ್ತು ಒಬ್ಬ ಪ್ಯಾರಾಮೆಡಿಕಲ್ ಮಾತ್ರ ಕರೆತರಲು ಅವಕಾಶ
  • ತಲಪಾಡಿ ಗಡಿಯಲ್ಲಿ ವೈದ್ಯಕೀಯ ತಂಡ ನಿಯೋಜಿಸಲಾಗಿದ್ದು, ಆಂಬುಲೆನ್ಸ್ ಮತ್ತು ರೋಗಿಯನ್ನು ಪ್ರಥಮ ಹಂತದ ದಾಖಲೆಗಳನ್ನು ನಿಗದಿತ ಚೆಕ್ ಲಿಸ್ಟ್ ನಲ್ಲಿ ಪರಿಶೀಲಿಸಿ ನಂತರ ಜಿಲ್ಲೆಗೆ ಪ್ರವೇಶ ನೀಡಲಾಗುವುದು.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.