ಪ್ರಮುಖ ಸುದ್ದಿಗಳು

ಕೇರಳ ಆಂಬುಲೆನ್ಸ್ ಪ್ರವೇಶಕ್ಕೆ ಅವಕಾಶ – ಷರತ್ತುಗಳು ಅನ್ವಯ

ಕೇರಳ, ಕರ್ನಾಟಕದ ತಲಪಾಡಿ ಅಂತಾರಾಜ್ಯ ಗಡಿಯನ್ನು ಮಾತ್ರ ತುರ್ತುವೈದ್ಯಕೀಯ ಚಿಕಿತ್ಸೆಗಾಗಿ ಉಭಯ ರಾಜ್ಯಗಳ ಹಿರಿಯ ಅಧಿಕಾರಿಗಳು ರೂಪಿಸಿರುವ ಮಾನದಂಡ ಅನುಗುಣವಾಗಿ ತೆರೆಯಲು ಸರ್ವೋಚ್ಛ ನ್ಯಾಯಾಲಯ ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ತುರ್ತು ಜಿಲ್ಲಾ ಮಟ್ಟದ ಕೋವಿಡ್ ನಿಯಂತ್ರಣ ಸಭೆಯನ್ನು ಐ.ಎಂ.ಎ. ಸದಸ್ಯರೊಂದಿಗೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ಜಾಹೀರಾತು

ವೈದ್ಯಕೀಯ ಚಿಕಿತ್ಸೆಗೆ ಕೆಲವು ಮಾನದಂಡ ರೂಪಿಸಲಾಗಿದ್ದು, ಇಂತಿವೆ.

  • ಕೇವಲ ಅತ್ಯಂತ ತುರ್ತು ಚಿಕಿತ್ಸೆ, ರಸ್ತೆ ಅಪಘಾತಗಳ ಚಿಕಿತ್ಸೆಗೆ ಸರಕಾರಿ ಆಂಬುಲೆನ್ಸ್ ಗಳಲ್ಲಿ ರೋಗಿಯನ್ನು ಕರೆತರಲು ಅನುಮತಿ.
  • ಕಾಸರಗೋಡಿನ ಸ್ಥಳೀಯ ಸರಕಾರಿ ವೈದ್ಯಾಧಿಕಾರಿಯು ಚಿಕಿತ್ಸೆಗೆ ಬರುವ ರೋಗಿಯು ನಾನ್ ಕೋವಿಡ್ ಎಂದು ಮತ್ತು ಚಿಕಿತ್ಸೆಯು ಕಾಸರಗೋಡಿನಲ್ಲಿ ಲಭ್ಯವಿಲ್ಲವೆಂದು ದೃಢೀಕರಿಸಿ ಸಲ್ಲಿಸಬೇಕು.
  • ರೋಗಿಯನ್ನು ಕರೆತರುವ ಆಂಬುಲೆನ್ಸ್ ಗಳನ್ನು ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯ ನಿರ್ದೇಶನದಂತೆ ಸ್ಯಾನಿಟೈಸ್ ಮಾಡಬೇಕು.
  • ರೋಗಿಯೊಂದಿಗೆ ಕೇವಲ ಒಬ್ಬ ಸಹಾಯಕ, ಆಂಬುಲೆನ್ಸ್ ಚಾಲಕ ಮತ್ತು ಒಬ್ಬ ಪ್ಯಾರಾಮೆಡಿಕಲ್ ಮಾತ್ರ ಕರೆತರಲು ಅವಕಾಶ
  • ತಲಪಾಡಿ ಗಡಿಯಲ್ಲಿ ವೈದ್ಯಕೀಯ ತಂಡ ನಿಯೋಜಿಸಲಾಗಿದ್ದು, ಆಂಬುಲೆನ್ಸ್ ಮತ್ತು ರೋಗಿಯನ್ನು ಪ್ರಥಮ ಹಂತದ ದಾಖಲೆಗಳನ್ನು ನಿಗದಿತ ಚೆಕ್ ಲಿಸ್ಟ್ ನಲ್ಲಿ ಪರಿಶೀಲಿಸಿ ನಂತರ ಜಿಲ್ಲೆಗೆ ಪ್ರವೇಶ ನೀಡಲಾಗುವುದು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ