ಬಂಟ್ವಾಳ

ನಿರಾಶ್ರಿತ ಕುಟುಂಬಗಳಿಗೆ ತಹಸೀಲ್ದಾರ್ ಸ್ಪಂದನೆ

www.bantwalnews.com Editor: Harish Mambady

ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದಲ್ಲಿ ಕಿಂಡಿ ಅಣೆಕಟ್ಟಿಗೆ ತಡೆಗೋಡೆ ನಿರ್ಮಿಸಲು ಗದಗ ಜಿಲ್ಲೆಯಿಂದ ಬಂದಿರುವ ಕೂಲಿಕಾರ್ಮಿಕರು ಕೊರೋನಾ ಲಾಕ್ ಡೌನ್ ನಿಂದಾಗಿ ನಿರಾಶ್ರಿತರಾಗಿದ್ದು, ಎಂಟು ಕುಟುಂಬಗಳ 19 ಜನರಿಗೆ, ಸಾಲೆತ್ತೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆಶ್ರಯ ಕಲ್ಪಿಸಲಾಯಿತು.

ಜಾಹೀರಾತು

ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಸ್ಥಳಕ್ಕೆ ಭೇಟಿ ನೀಡಿ, ನಿರಾಶ್ರಿತರ ಅಹವಾಲು ಆಲಿಸಿ, ಅಗತ್ಯ ವ್ಯವಸ್ಥೆ ಬಗ್ಗೆ ಕ್ರಮಕೈಗೊಂಡರು. ಈ ಸಂದರ್ಭ ಸಂಕಷ್ಟ ಅನುಭವಿಸುತ್ತಿದ್ದ ಕುಟುಂಬದವರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಲು ಅವರು ಸೂಚಿಸಿದರು ಈ ಸಂದರ್ಭ ವಿಟ್ಲ ಕಂದಾಯ ನಿರೀಕ್ಷಕರಾದ ದಿವಾಕರ ಮುಗುಳಿಯ, ಸಾಲೆತ್ತೂರು ಗ್ರಾ.ಪಂ.ಕಾರ್ಯದರ್ಶಿ, ಸಾಲೆತ್ತೂರು ಗ್ರಾಮ ಲೆಕ್ಕಾಧಿಕಾರಿ ಅನಿಲ್,ಗ್ರಾಮ ಸಹಾಯಕ ಮಹಾಬಲ ಹಾಗೂ ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.