ಬಂಟ್ವಾಳ

ಪಡಿತರ ಅಂಗಡಿಗಳ ವಿತರಣೆ ವೀಕ್ಷಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ 2 ತಿಂಗಳ ಪಡಿತರ ಅಕ್ಕಿ ವಿತರಣೆಯ ಕಾರ್ಯ ನಡೆಯುತ್ತಿದ್ದು, ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಂಟ್ವಾಳ ಪೇಟೆಯ ನ್ಯಾಯಬೆಲೆ ಅಂಗಡಿಗೆ ತೆರಳಿ ವಿತರಣಾ ಕಾರ್ಯವನ್ನು ಪರಿಶೀಲಿಸಿದರು.

ಜಾಹೀರಾತು

www.bantwalnews.com Editor: Harish Mambady

ಬಳಿಕ ಶಾಸಕರು ಬಿ.ಸಿ.ರೋಡಿನಲ್ಲಿರುವ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ರಶ್ಮಿ ಎಸ್.ಆರ್. ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಜತೆಗೆ ಬಂಟ್ವಾಳದಲ್ಲಿ ಕೊರೊನಾ ವೈರಸ್ ಕುರಿತ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಿದರು.

ತಾಲೂಕಿನಲ್ಲಿ ಪಡಿತರ ಅಕ್ಕಿ ವಿತರಣೆಯ ಕಾರ್ಯ ನಡೆಯುತ್ತಿದ್ದು, ಕೆಲವೆಡೆ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂಬ ದೂರುಗಳು ಕೇಳಿಬಂದಿತ್ತು. ಇನ್ನು ಕೆಲವೆಡೆ ಪಡಿತರ ಅಕ್ಕಿ ಮುಗಿದಿದ್ದು, ಅಲ್ಲಿಗೆ ಅಕ್ಕಿ ಪೂರೈಕೆಯೂ ಆಗಬೇಕಿದೆ. ಉಳಿದಂತೆ ಅಕ್ಕಿ ವಿತರಣೆಯ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಸುದರ್ಶನ್ ಬಜ ಶಾಸಕರ ಜತೆಗಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.