ಸಜೀಪಮೂಡ, ಮುನ್ನೂರು: ರೈ ನೇತೃತ್ವದಲ್ಲಿ ಅವಶ್ಯ ವಸ್ತುಗಳ ವಿತರಣೆ

www.bantwalnews.com Editor: Harish Mambady

ಜಾಹೀರಾತು

ಮಾಜಿ ಸಚಿವ ಬಿ.ರಮನಾಥ ರೈ ಅವರ ಮಾರ್ಗದರ್ಶನದಲ್ಲಿ, ತಾಲೂಕು ಪಂಚಾಯಿತಿ ಸದಸ್ಯ ಕೆ.ಸಂಜೀವ ಪೂಜಾರಿಯವರ ನೇತೃತ್ವದಲ್ಲಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಸದಾನಂದ ಪೂಂಜಾ ಅವರ ಸಹಕಾರದೊಂದಿಗೆ  ಸಜೀಪಮುಡ ಗ್ರಾಮ ಪಂಚಾಯತಿ, ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರ ಸಂಘ, ಎನ್ ವಿ.ಡಿಜಿಟಲ್ಸ್ ಮೆಲ್ಕಾರ್ ಇವರ ಸಹಯೋಗದಲ್ಲಿ ಸಜೀಪ ಮೂಡ ಗ್ರಾಮದ ಎಲ್ಲಾ ಮನೆಗಳಿಗೆ ಅಕ್ಕಿ ವಿತರಣ ಕಾರ್ಯಕ್ರಮಕ್ಕೆ ಸಜೀಪಮೂಡ  ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಹಾಗೂ ಬೊಳ್ಳಾಯಿಯಲ್ಲಿ ಚಾಲನೆ ನೀಡಲಾಯಿತು.

ಮಾಜಿ ಸಚಿವ ಬಿ. ರಮನಾಥ ರೈಯವರು ಮನೆಮನೆಗಳಿಗೆ  ತೆರಳಿ ತಲಾ 10 ಕೆ.ಜಿ.ಯಂತೆ ಅಕ್ಕಿಯನ್ನು ವಿತರಿಸಿದರು. ಸಜೀಪಮೂಡ ಗ್ರಾಮದಲ್ಲಿ ಒಟ್ಟು 2500 ರಷ್ಟು ಮನೆಗಳಿದ್ದು ಬಡವ ಶ್ರೀಮಂತರೆನ್ನದೆ ಎಲ್ಲಾ ಮನೆಗಳಿಗೂ ಒಟ್ಟು 250 ಕ್ವಿಂಟಲ್ ಅಕ್ಕಿಯನ್ನು ವಿತರಿಸಲಿದ್ದೇವೆ. ಮುಂದಿನ ಎರಡು ಮೂರು ದಿನಗಳಲ್ಲಿ ಎಲ್ಲಾ ಮನೆಗಳಿಗೂ ಅಕ್ಕಿ ತಲಿಪಲಿದೆ ಎಂದು ತಾ.ಪಂ.ಸದಸ್ಯ ಸಂಜೀವ ಪೂಜಾರಿ ತಿಳಿಸಿದ್ದಾರೆ. ಮಂಗಳವಾರ ಬೊಳ್ಳಾಯಿ, ಜಾರಕೋಡಿನಗ್ರಿ, ಪಣೋಲಿ ಬೈಲು, ಕಂಚಿಲ ಗುರುಮಂದಿರ ಪರಿಸರದಲ್ಲಿ ಅಕ್ಕಿ ವಿತರಿಸಲಾಗಿದೆ. ಸಂದರ್ಭ ತಾ.ಪಂ.ಸದಸ್ಯ ಸಂಜೀವ ಪೂಜಾರಿ, ಸಜೀಪಮೂಡ ಗ್ರಾ.ಪಂ.ಅಧ್ಯಕ್ಷ ವಿಶ್ವನಾಥ ಬೆಳ್ಚಾಡ, ಪ್ರಮುಖರಾದ ರಮೇಶ್ ಪಣೋಲಿ ಬೈಲು, ಜಯಶಂಕರ ಕಾನ್ಸಾಲೆ, ಸುದೀಪ್ ಕುಮಾರ್ ಶೆಟ್ಟಿ, ಗಿರೀಶ್  ಕುಮಾರ್ ಪೆರ್ವ, ಯೋಗೀಶ್ ಬೆಳ್ವಾಡಕರಿಂ ನಗ್ರಿ, ಹಮೀದ್, ಇಕ್ಬಾಲ್ ನಂದಾವರ, ಹಜೀದ್, ಅಬ್ದುಲ್ ಕುಂಞ ಅಶೋಕ್ ಕೋಮಾಲಿ, ರೋಹಿತ್ ಪೂಜಾರಿ ಪಟ್ಟುಗುಡ್ಡೆ, ವಿನೋಧ್ ಪೂಜಾರಿ ಕೊಮಾಲಿ ಮತ್ತಿತರರು ಉಪಸ್ಥಿತರಿದ್ದರು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಜೀಪಮೂಡ, ಮುನ್ನೂರು: ರೈ ನೇತೃತ್ವದಲ್ಲಿ ಅವಶ್ಯ ವಸ್ತುಗಳ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*