ಜಿಲ್ಲಾ ಸುದ್ದಿ

ಅನಾರೋಗ್ಯದಿಂದ ಬಳಲುತ್ತಿರುವ ಗೃಹರಕ್ಷಕಿಗೆ ನೆರವು

ಅನಾರೋಗ್ಯದಿಂದ ಬಳಲುತ್ತಿದ್ದ ಮಂಗಳೂರು ಘಟಕದ ಗೃಹರಕ್ಷಕಿ ಚಂಪಾ ಮನೆಗೆ ಗೃಹರಕ್ಷಕ ದಳ ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಗುರುವಾರ ಬೆಳಗ್ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.


ಚಂಪಾರವರು ಗೃಹರಕ್ಷಕದಳದಲ್ಲಿ ಕಳೆದ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಸಂಚಾರಿ ಪೂರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಮಧುಮೇಹ ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಅವರಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸಲಾಯಿತು ಹಾಗೂ ಗೃಹರಕ್ಷಕ ದಳ ಪರವಾಗಿ 25 ಕೆ.ಜಿ. ಅಕ್ಕಿ, ಮುಖಕವಚ, ಸಾನಿಟೈಸರ್ಗಳನ್ನು ಜಿಲ್ಲಾ ಸಮಾದೇಷ್ಟರಾದ ಡಾ ಮುರಲೀ ಮೋಹನ್ ಚೂಂತಾರು ರವರು ನೀಡಿದರು. ಈ ಸಂದರ್ಭದಲ್ಲಿ ಭುವಿನಾ ಡೆಂಟಲ್ ಕ್ಲಿನಿಕ್ನ ಡೆಂಟಲ್ ಸರ್ಜನ್ ಡಾ. ಅಶ್ವಥ್ ಕುಮಾರ್ ಉಪಸ್ಥಿತರಿದ್ದರು. ಮಂಗಳೂರು ಘಟಕದ ಗೃಹರಕ್ಷಕರುಗಳಾದ ದಿವಾಕರ, ಮಹೇಶ್ ಮತ್ತು ಲಿಂಗಪ್ಪ ಇವರುಗಳು ಉಪಸ್ಥಿತರಿದ್ದರು. ಇದೇ ವೇಳೆ ಚಂಪಾ ಅವರಿಗೆ ಅಗತ್ಯವುಳ್ಳ ವೈದ್ಯಕೀಯ ಚಿಕಿತ್ಸೆಗಳ ಕುರಿತು ಸಲಹೆ ನೀಡಲಾಯಿತು.

ಜಾಹೀರಾತು

www.bantwalnews.com Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts