ಕೋವಿಡ್ 19 ನಿಂದ ಕೆಲಸವಿಲ್ಲದೆ ತೊಂದರೆಗೆ ಒಳಗಾಗಿರುವ ಧ್ವನಿ ಬೆಳಕು ಬೆಳಕು ಸಂಯೋಜಕರಿಗೆ ಸಹಾಯಹಸ್ತ ನೀಡುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರಿಗೆ ಬಂಟ್ವಾಳ ತಾಲೂಕು ಧ್ವನಿ ಬೆಳಕು ಸಂಯೋಜಕರ ಒಕ್ಕೂಟದ ವತಿಯಿಂದ ಮನವಿ ಸಲ್ಲಿಸಲಾಯಿತು.
ಸಭೆ ಸಮಾರಂಭಗಳಲ್ಲಿ ಧ್ವನಿ ಬೆಳಕಿನ ವ್ಯವಸ್ಥೆಯನ್ನು ಬಾಡಿಗೆ ಆಧಾರದಲ್ಲಿ ನಿರ್ವಹಿಸಿ ಅದರಿಂದ ಜೀವನೋಪಾಯ ಕಂಡುಕೊಳ್ಳುವ ನಾವು ಕೋವಿಡ್ 19 ನಿಂದಾಗಿ ದೇಶದಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಭೆ ಸಮಾರಂಭಗಳು ರದ್ದಾಗಿದೆ. ಅದನ್ನೆ ನಂಬಿಕೊಂಡಿರುವ ಸಾವಿರಾರು ಮಂದಿ ಸದಸ್ಯರು ಮುಂದಿನ ದಾರಿ ತೋಚದೆ ಕಂಗಾಲಾಗಿದ್ದಾರೆ. ಆದುದರಿಂದ ಸರ್ಕಾರ ತುರ್ತಾಗಿ ತಮಗೆ ಸಹಾಯಧನ ಪಿಂಚಣಿ ಒದಗಿಸಿಕೊಡಬೇಕಾಗಿ ಮನವಿಯಲ್ಲಿ ತಿಳಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)