ದ.ಕ. ಜಿಲ್ಲೆ: COVID 19 ನಿಂದ ಗುಣಮುಖರಾದ 70ರ ಮಹಿಳೆ, 12ರಲ್ಲಿ 7 ಗುಣಮುಖ, ಐವರಿಗಷ್ಟೇ ಚಿಕಿತ್ಸೆ

ಮಾ.9ರಂದು ಸೌದಿ ಅರೇಬಿಯಾದಿಂದ 70 ವರ್ಷದ ಮಹಿಳೆಯೊಬ್ಬರು ಕ್ಯಾಲಿಕಟ್ ಗೆ ಬಂದಿದ್ದರು. 19ರಂದು ಅವರು ಚಿಕಿತ್ಸೆಗಾಗಿ ಮಂಗಳೂರಿಗೆ ಆಗಮಿಸಿದ್ದು, ಮಾ.24ರಂದು ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗಿ ಏ.7 ಮತ್ತು 8ರಂದು ಗಂಟಲು ದ್ರವ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ (ಏ.12) ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಈ ಪ್ರಕರಣದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲಾದ 12 ಕೋವಿಡ್ ಪ್ರಕರಣಗಳ ಪೈಕಿ 7 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ತಮ್ಮ ಮನೆಗಳಿಗೆ ತೆರಳಿದಂತಾಗಿದೆ.

ಜಾಹೀರಾತು

ಭಾನುವಾರ 7 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 32 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ರಿಪೋರ್ಟ್ ಹೊರಬರಲು ಬಾಕಿ ಇದೆ. 28 ಮಂದಿಯ ಪರೀಕ್ಷೆ ವರದಿ ಬಂದಿದ್ದು ಎಲ್ಲವೂ ನೆಗೆಟಿವ್ ಆಗಿದೆ. ಭಾನುವಾರ 26 ಮಂದಿಯ ಗಂಟಲು ದ್ರವ ಮಾದರಿಯನ್ನು ವೆನ್ಲಾಕ್ ಆಸ್ಪತ್ರೆಯ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ.

ಹೋಂ ಕ್ವಾರಂಟೈನ್ ನಲ್ಲಿ 2103 ಮಂದಿ ಈಗ ಇದ್ದಾರೆ. ಗಮನಾರ್ಹ ವಿಷಯವೇನೆಂದರೆ, ಇದುವರೆಗೆ ಹೋಂ ಕ್ವಾರಂಟೈನ್ ನಲ್ಲಿದ್ದು , 28 ದಿನಗಳ ಕಾಲ ಮನೆಯಲ್ಲೇ ಉಳಿದವರಲ್ಲಿ 3970 ಮಂದಿಯಲ್ಲಿ ಯಾವುದೇ ಸೋಂಕು ಲಕ್ಷಣ ಕಂಡುಬಾರದ ಕಾರಣ ಅವರ ಹೋಂ ಕ್ವಾರಂಟೈನ್ ಅವಧಿ ಮುಗಿದಂತಾಗಿದೆ.

ಬಂಟ್ವಾಳನ್ಯೂಸ್  ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ದ.ಕ. ಜಿಲ್ಲೆ: COVID 19 ನಿಂದ ಗುಣಮುಖರಾದ 70ರ ಮಹಿಳೆ, 12ರಲ್ಲಿ 7 ಗುಣಮುಖ, ಐವರಿಗಷ್ಟೇ ಚಿಕಿತ್ಸೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*