ಪ್ರಮುಖ ಸುದ್ದಿಗಳು

ದ.ಕ. ಜಿಲ್ಲೆ: COVID 19 ನಿಂದ ಗುಣಮುಖರಾದ 70ರ ಮಹಿಳೆ, 12ರಲ್ಲಿ 7 ಗುಣಮುಖ, ಐವರಿಗಷ್ಟೇ ಚಿಕಿತ್ಸೆ

ಮಾ.9ರಂದು ಸೌದಿ ಅರೇಬಿಯಾದಿಂದ 70 ವರ್ಷದ ಮಹಿಳೆಯೊಬ್ಬರು ಕ್ಯಾಲಿಕಟ್ ಗೆ ಬಂದಿದ್ದರು. 19ರಂದು ಅವರು ಚಿಕಿತ್ಸೆಗಾಗಿ ಮಂಗಳೂರಿಗೆ ಆಗಮಿಸಿದ್ದು, ಮಾ.24ರಂದು ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗಿ ಏ.7 ಮತ್ತು 8ರಂದು ಗಂಟಲು ದ್ರವ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ (ಏ.12) ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಈ ಪ್ರಕರಣದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲಾದ 12 ಕೋವಿಡ್ ಪ್ರಕರಣಗಳ ಪೈಕಿ 7 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ತಮ್ಮ ಮನೆಗಳಿಗೆ ತೆರಳಿದಂತಾಗಿದೆ.

ಜಾಹೀರಾತು

ಭಾನುವಾರ 7 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 32 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ರಿಪೋರ್ಟ್ ಹೊರಬರಲು ಬಾಕಿ ಇದೆ. 28 ಮಂದಿಯ ಪರೀಕ್ಷೆ ವರದಿ ಬಂದಿದ್ದು ಎಲ್ಲವೂ ನೆಗೆಟಿವ್ ಆಗಿದೆ. ಭಾನುವಾರ 26 ಮಂದಿಯ ಗಂಟಲು ದ್ರವ ಮಾದರಿಯನ್ನು ವೆನ್ಲಾಕ್ ಆಸ್ಪತ್ರೆಯ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ.

ಹೋಂ ಕ್ವಾರಂಟೈನ್ ನಲ್ಲಿ 2103 ಮಂದಿ ಈಗ ಇದ್ದಾರೆ. ಗಮನಾರ್ಹ ವಿಷಯವೇನೆಂದರೆ, ಇದುವರೆಗೆ ಹೋಂ ಕ್ವಾರಂಟೈನ್ ನಲ್ಲಿದ್ದು , 28 ದಿನಗಳ ಕಾಲ ಮನೆಯಲ್ಲೇ ಉಳಿದವರಲ್ಲಿ 3970 ಮಂದಿಯಲ್ಲಿ ಯಾವುದೇ ಸೋಂಕು ಲಕ್ಷಣ ಕಂಡುಬಾರದ ಕಾರಣ ಅವರ ಹೋಂ ಕ್ವಾರಂಟೈನ್ ಅವಧಿ ಮುಗಿದಂತಾಗಿದೆ.

ಬಂಟ್ವಾಳನ್ಯೂಸ್  ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.