ಬಂಟ್ವಾಳ

ಕಣ್ತಪ್ಪಿಸಿ ಅನಗತ್ಯ ಸಂಚರಿಸುವವರ ವಿರುದ್ಧ ಡ್ರೋಣ್

ನಿಷೇಧಾಜ್ಞೆ ಸಂದರ್ಭ ಅದನ್ನು ಉಲ್ಲಂಘಿಸಿ, ಕಣ್ತಪ್ಪಿಸಿ ಓಡಾಡುವವರನ್ನು ಪತ್ತೆಹಚ್ಚಲು ಡ್ರೋನ್ ಕ್ಯಾಮರಾ ಬಂಟ್ವಾಳ ಉಪವಿಭಾಗ ವ್ಯಾಪ್ತಿಯ ಠಾಣೆಗಳಲ್ಲಿ ಅಳವಡಿಕೆ ಮಾಡಲಾಗುತ್ತಿದೆ. ಈಗಾಗಲೇ ಇದರ ಪ್ರಾಯೋಗಿಕ ಪರೀಕ್ಷೆಗಳು ನಡೆದಿವೆ.

ಜಾಹೀರಾತು

ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಪ್ರತಿ ಠಾಣಾ ವ್ಯಾಪ್ತಿಯಲ್ಲೂ ಡ್ರೋನ್ ಕ್ಯಾಮರಾದ ಕಾರ್ಯಾಚರಣೆ ನಡೆಯಲಿದೆ. ವಾಹನಗಳ ಓಡಾಟ, ಜನರ ಅನಗತ್ಯ ತಿರುಗಾಟವನ್ನು ಪತ್ತೆ ಹಚ್ಚುವುದಕ್ಕೆ ಡ್ರೋನ್ ಕ್ಯಾಮರಾದ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತದೆ, ಇದರಿಂದ ನಿಷೇಧಾಜ್ಞೆಯ ಕಟ್ಟುನಿಟ್ಟಿನ ಅನುಷ್ಠಾನ ಸಾಧ್ಯವಾಗಲಿದೆ ಎಂದು ಬಂಟ್ವಾಳ ಡಿವೈಎಸ್‌ಪಿ ವೆಲಂಟೈನ್ ಡಿಸೋಜ ಅವರು ತಿಳಿಸಿದ್ದಾರೆ.

ಜನರ ಓಡಾಟ ಅಥವಾ ವಾಹನಗಳ ಓಡಾಟ ಹೆಚ್ಚಿರುವ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ಬಂದಲ್ಲಿ ಅಂತಹ ಪ್ರದೇಶದಲ್ಲಿ ಡ್ರೋನ್ ಕ್ಯಾಮರಾ ಬಳಕೆ ಮಾಡಿಕೊಂಡು ಆದೇಶ ಉಲ್ಲಂಘನೆ ನಡೆಸುವವರು ಯಾರು ಎಂಬುದನ್ನು ಪತ್ತೆ ಹಚ್ಚಲಿದ್ದಾರೆ. ಅಂತಹ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಕಠಿನ ಕ್ರಮ ಜರಗಿಸಲಿದ್ದಾರೆ.

ಅನಗತ್ಯವಾಗಿ ಗುಂಪು ಸೇರಿ ಚರ್ಚೆ ನಡೆಸುವುದು, ಅಂಗಡಿಗಳ ಮುಂದೆ ಗುಂಪು ಸೇರುವುದು, ಒಳ ಪ್ರದೇಶಗಳಲ್ಲಿ ಕ್ರೀಡೆ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ನಡೆಸಿದರೆ ಅದು ಪೊಲೀಸ್ ಇಲಾಖೆಯ ಗಮನಕ್ಕೆ ಬರಲಿದೆ. ಸಾಮಾಜಿಕ ಅಂತರದ ಆದೇಶವನ್ನೂ ಉಲ್ಲಂಘಿಸಿದರೂ ಡ್ರೋನ್ ಕ್ಯಾಮರಾ ಅದನ್ನು ಪತ್ತೆ ಹಚ್ಚಲಿದೆ.

www.bantwalnews.com ಸಂಪಾದಕ: ಹರೀಶ ಮಾಂಬಾಡಿ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

10 hours ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

2 days ago