ಕೊರೊನಾ ಮಹಾಮಾರಿಯಿಂದ ಲಾಕ್ಡೌನ್ ವೇಳೆ ಹಗಲು ರಾತ್ರಿ ಕರ್ತವ್ಯ ನಿರ್ವಹಿತ್ತಿರುವ ವಿಟ್ಲ ಪೊಲೀಸರಿಗೆ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಯಿತು.
ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಸದಸ್ಯ ಲೂಯಿಸ್ ಮಸ್ಕರೇಂಞಸ್ ಅವರ ನೇತೃತ್ವದಲ್ಲಿ ವಿಟ್ಲ ಸುತ್ತಮುತ್ತಲಿನ ಸುಮಾರು 85ಕ್ಕೂ ಅಧಿಕ ಕುಟುಂಬಗಳಿಗೆ ದಿನಸಿ ಸಾಮಗ್ರಿ ವಿತರಿಸಲಾಗಿದೆ. ಇದೀಗ ಹಗಲು ರಾತ್ರಿ ಕೊರೊನಾ ಹೋರಾಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಮಧ್ಯಾಹ್ನ ಊಟ ವ್ಯವಸ್ಥೆ ಕಲ್ಪಿಸಲಾಯಿತು. ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಅವರು ಚಾಲನೆ ನೀಡಿದರು. ಲಯನ್ಸ್ ಪ್ರಮುಖರಾದ ಡಾ. ಗೀತಪ್ರಕಾಶ್, ಸಂತೋಷ್ ಕುಮಾರ್ ಶೆಟ್ಟಿ ಪೆಲ್ತಡ್ಕ, ಮನೋಜ್ ಕುಮಾರ್ ರೈ, ಮಂಗೇಶ್ ಭಟ್ ವಿಟ್ಲ, ಗಂಗಾಧರ್, ರವಿಶಂಕರ್ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
www.bantwalnews.com Editor: Harish Mambady
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)