ನಿಯಮ ಉಲ್ಲಂಘಿಸಿ ಬಂದ ವಾಹನಗಳು ವಿಟ್ಲ ಪೊಲೀಸರ ವಶಕ್ಕೆ

ಕೇರಳದಿಂದ ಕರ್ನಾಟಕಕ್ಕೆ ನಿಯಮವನ್ನು ಉಲ್ಲಂಘಿಸಿ ಗಡಿಯಲ್ಲಿ ಜನ ಸಾಗಾಟದಲ್ಲಿ ತೊಡಗಿದ್ದ ವಾಹನಗಳನ್ನು ಹಾಗೂ ರಸ್ತೆಯಲ್ಲಿ ಅಪಾಯಕಾರಿಯಾಗಿ ಓಡಾಡುತ್ತಿದ್ದ ದ್ವಿಚಕ್ರವಾಹನಗಳನ್ನು ವಿಟ್ಲ ಪೊಲೀಸ್ ಉಪನಿರೀಕ್ಷಕ ವಿನೋದ್ ಎಸ್. ಕೆ. ಅವರ ತಂಡ ವಶಕ್ಕೆ ಪಡೆದಿದೆ.

ಜಾಹೀರಾತು

ಘಟನೆ ಪೆರುವಾಯಿ ಕಡಂಬಿಲದಲ್ಲಿ ಶನಿವಾರ ನಡೆದಿದೆ. ಕೇರಳ ಮೂಲದ ಟೂರಿಸ್ಟ್ ವಾಹನ, ಟೂರಿಸ್ಟ್ ಅಟೋ ರಿಕ್ಷಾ, ಎರಡು ಕೇರಳದ ಹಾಗೂ ಒಂದು ಕರ್ನಾಟಕದ ಮೋಟಾರ್ ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬೆರಿಪದವು ಮೂಲಕ ಪೆರುವಾಯಿ ಹಾಗೂ ಶಿರಂಕಲ್ಲು ಸಂಪರ್ಕಿಸುವ ರಸ್ತೆ ಇದ್ದು, ಇದಕ್ಕೆ ಗಡಿಯಲ್ಲಿ ಮಣ್ಣು ಹಾಕಿ ಸಂಪರ್ಕ ಕಡಿತ ಮಾಡಿದ್ದರೂ ಅಕ್ರಮವಾಗಿ ಓಡಾಟದ ಪ್ರಯತ್ನ ಮಾಡಿದ್ದಾರೆ. ವಾಹನ ಸವಾರರು ಪ್ರಾಣಕ್ಕೆ ಅಪಾಯಕಾರಿಯಾಗಿರುವ ಕೊರೋನಾ ಸೋಕು ಹರಡುವ ಸಾಧ್ಯತೆ ಇರುವುದನ್ನೂ ನೀರ್ಲಕ್ಷ್ಯ ಮಾಡಿ ಕೇರಳ ರಾಜ್ಯದ ಕಾಸರಗೋಡು ನಿವಾಸಿಗಳನ್ನು ಕರ್ನಾಟಕ ಗಡಿಯ ಮೂಲಕ ಬಂಟ್ವಾಳ ತಾಲೂಕು ಪೆರುವಾಯಿ ಎಂಬಲ್ಲಿಗೆ ಸಾಗಾಟ ಮಾಡುವ ಉದ್ದೇಶ ಪೂರ್ವಕ ಕೃತ್ಯದಲ್ಲಿ ತೊಡಗಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ಮಾಡಿದ್ದು ಆರೋಪಿಗಳು ಕೃತ್ಯಕ್ಕೆ ಬಳಸಿದ ವಾಹನಗಳನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳ ಮಹಜರು ನಡೆಸಿ ವಾಹನಗಳನ್ನು ವಶಕ್ಕೆ ಪಡೆದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಿಯಮ ಉಲ್ಲಂಘಿಸಿ ಬಂದ ವಾಹನಗಳು ವಿಟ್ಲ ಪೊಲೀಸರ ವಶಕ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*