ವಿಟ್ಲ

ನಿಯಮ ಉಲ್ಲಂಘಿಸಿ ಬಂದ ವಾಹನಗಳು ವಿಟ್ಲ ಪೊಲೀಸರ ವಶಕ್ಕೆ

ಕೇರಳದಿಂದ ಕರ್ನಾಟಕಕ್ಕೆ ನಿಯಮವನ್ನು ಉಲ್ಲಂಘಿಸಿ ಗಡಿಯಲ್ಲಿ ಜನ ಸಾಗಾಟದಲ್ಲಿ ತೊಡಗಿದ್ದ ವಾಹನಗಳನ್ನು ಹಾಗೂ ರಸ್ತೆಯಲ್ಲಿ ಅಪಾಯಕಾರಿಯಾಗಿ ಓಡಾಡುತ್ತಿದ್ದ ದ್ವಿಚಕ್ರವಾಹನಗಳನ್ನು ವಿಟ್ಲ ಪೊಲೀಸ್ ಉಪನಿರೀಕ್ಷಕ ವಿನೋದ್ ಎಸ್. ಕೆ. ಅವರ ತಂಡ ವಶಕ್ಕೆ ಪಡೆದಿದೆ.

ಜಾಹೀರಾತು

ಘಟನೆ ಪೆರುವಾಯಿ ಕಡಂಬಿಲದಲ್ಲಿ ಶನಿವಾರ ನಡೆದಿದೆ. ಕೇರಳ ಮೂಲದ ಟೂರಿಸ್ಟ್ ವಾಹನ, ಟೂರಿಸ್ಟ್ ಅಟೋ ರಿಕ್ಷಾ, ಎರಡು ಕೇರಳದ ಹಾಗೂ ಒಂದು ಕರ್ನಾಟಕದ ಮೋಟಾರ್ ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬೆರಿಪದವು ಮೂಲಕ ಪೆರುವಾಯಿ ಹಾಗೂ ಶಿರಂಕಲ್ಲು ಸಂಪರ್ಕಿಸುವ ರಸ್ತೆ ಇದ್ದು, ಇದಕ್ಕೆ ಗಡಿಯಲ್ಲಿ ಮಣ್ಣು ಹಾಕಿ ಸಂಪರ್ಕ ಕಡಿತ ಮಾಡಿದ್ದರೂ ಅಕ್ರಮವಾಗಿ ಓಡಾಟದ ಪ್ರಯತ್ನ ಮಾಡಿದ್ದಾರೆ. ವಾಹನ ಸವಾರರು ಪ್ರಾಣಕ್ಕೆ ಅಪಾಯಕಾರಿಯಾಗಿರುವ ಕೊರೋನಾ ಸೋಕು ಹರಡುವ ಸಾಧ್ಯತೆ ಇರುವುದನ್ನೂ ನೀರ್ಲಕ್ಷ್ಯ ಮಾಡಿ ಕೇರಳ ರಾಜ್ಯದ ಕಾಸರಗೋಡು ನಿವಾಸಿಗಳನ್ನು ಕರ್ನಾಟಕ ಗಡಿಯ ಮೂಲಕ ಬಂಟ್ವಾಳ ತಾಲೂಕು ಪೆರುವಾಯಿ ಎಂಬಲ್ಲಿಗೆ ಸಾಗಾಟ ಮಾಡುವ ಉದ್ದೇಶ ಪೂರ್ವಕ ಕೃತ್ಯದಲ್ಲಿ ತೊಡಗಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ಮಾಡಿದ್ದು ಆರೋಪಿಗಳು ಕೃತ್ಯಕ್ಕೆ ಬಳಸಿದ ವಾಹನಗಳನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳ ಮಹಜರು ನಡೆಸಿ ವಾಹನಗಳನ್ನು ವಶಕ್ಕೆ ಪಡೆದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.