ಕರೋನಾ ಕಾಯಿಲೆ ನಿಯಂತ್ರಣಕ್ಕೆ ಸಂಬಂಧಿಸಿ ಕುಟುಂಬದ ಹಿತರಕ್ಷಣೆ ಸಲುವಾಗಿ ಆರೋಗ್ಯ ಇಲಾಖೆಯಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ, ಎಲ್ಲ ಮಾಹಿತಿಗಳನ್ನು ಅತ್ಯಂತ ಗೌಪ್ಯವಾಗಿಡಲಾಗುವುದು, ಯಾವುದೇ ದಾಖಲೆಗಳನ್ನು ತಮ್ಮಿಂದ ಪಡೆಯಲಾಗುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಸ್ಪಷ್ಟಪಡಿಸಿದ್ದಾರೆ.
ಜಾಹೀರಾತು
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಸರ್ವೆ ಕಾರ್ಯ ಆರಂಭಿಸಿದ್ದು, ತಮ್ಮ ಮನೆಗೆ ಬಂದು ಯಜಮಾನನ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮಾಹಿತಿ ಪಡೆಯಲಿದ್ದು, ಮನೆಯ ಕುಟುಂಬದ ಸದಸ್ಯರಲ್ಲಿ ಜ್ವರ, ಗಂಟಲುನೋವು, ಅಸ್ತಮಾ ಇತ್ಯಾದಿಗಳು ಇದ್ದಲ್ಲಿ ಇವರ ಮಾಹಿತಿಯನ್ನೂ ಪಡೆಯಲಿದ್ದಾರೆ. ಕುಟುಂಬದ ವಯಸ್ಕರ (60 ವರ್ಷ ಮೇಲ್ಪಟ್ಟ) ಸಂಖ್ಯೆ, ಬಿಪಿ, ಸಕ್ಕರೆಕಾಯಿಲೆ, ಕಿಡ್ನಿ ವೈಫಲ್ಯ ಸಮಸ್ಯೆ, ಕ್ಯಾನ್ಸರ್ ಇತ್ಯಾದಿ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಮಾಹಿತಿಯು ಪ್ರತಿಯೊಂದು ಕುಟುಂಬದ ಹಿತರಕ್ಷಣೆಯ ಸಲುವಾಗಿದ್ದು, ಎಲ್ಲವನ್ನೂ ಗೌಪ್ಯವಾಗಿಡಲಾಗುವುದು. ಯಾವುದೇ ದಾಖಲೆಗಳನ್ನು ತಮ್ಮಿಂದ ಪಡೆಯುವುದಿಲ್ಲ ಎಂದವರು ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ನಿಮ್ಮ ಕುಟುಂಬದ ಹಿತರಕ್ಷಣೆಗಾಗಿ ಆರೋಗ್ಯ ಇಲಾಖೆಯಿಂದ ಮಾಹಿತಿ ಸಂಗ್ರಹ"
Be the first to comment on "ನಿಮ್ಮ ಕುಟುಂಬದ ಹಿತರಕ್ಷಣೆಗಾಗಿ ಆರೋಗ್ಯ ಇಲಾಖೆಯಿಂದ ಮಾಹಿತಿ ಸಂಗ್ರಹ"