ಜನಧನ ಖಾತೆ ಹಣ ವಾಪಸ್ ಹೋಗಲ್ಲ: ವದಂತಿಗಳಿಗೆ ಕಿವಿಗೊಡಬೇಡಿ

  • ಅಗತ್ಯವಿದ್ದರೆ ಮಾತ್ರ ಬ್ಯಾಂಕಿನಿಂದ ಹಣ ಪಡೆಯಿರಿ – ಜಿಲ್ಲಾಧಿಕಾರಿ ಮನವಿ

ಪ್ರಧಾನಮಂತ್ರಿ  ಗರೀಬ್ ಕಲ್ಯಾಣ ಪ್ಯಾಕೇಜ್ ನಲ್ಲಿ ಜನಧನ ಮಹಿಳಾ ಖಾತೆದಾರರಿಗೆ ಪ್ರತಿ ತಿಂಗಳು ತಲಾ 500 ರೂಗಳಂತೆ 3 ತಿಂಗಳು ಕೇಂದ್ರ ಸರಕಾರ ಜಮಾ ಮಾಡಲಿದ್ದು, ಬ್ಯಾಂಕುಗಳಿಗೆ ಜಮಾ ಆಗಿರುವ ಹಣ ಯಾವುದೇ ಕಾರಣಕ್ಕೂ ಹಿಂಪಡೆಯಲಾಗುವುದಿಲ್ಲ. ಜಮಾ ಆಗಿರುವ ಹಣವು ನಿಮ್ಮ ಖಾತೆಯಲ್ಲಿಯೇ ಇದ್ದು, ಆ ಹಣವನ್ನು ಡ್ರಾ ಮಾಡಿಕೊಳ್ಳಲು ಯಾವುದೇ ಕಾಲಮಿತಿ ಇರುವುದಿಲ್ಲ. ಹಾಗಾಗಿ ಯಾವುದೇ ವದಂತಿಗಳಿಗೆ ಕಿವಿಗೊಡದೆ ನಿಮಗೆ ಅವಶ್ಯಕತೆ ಇದ್ದಲ್ಲಿ ಮಾತ್ರ ಬ್ಯಾಂಕನ್ನು ಸಂಪರ್ಕಿಸಿ, ಹಣ ಪಡೆಯಬಹುದು. ಬ್ಯಾಂಕುಗಳಿಗೆ ಭೇಟಿ ನೀಡಿದ ಸಮಯ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮನವಿ ಮಾಡಿದ್ದಾರೆ.

ಜಾಹೀರಾತು

ಕೇಂದ್ರ ಕಾರ್ಮಿಕ ಇಲಾಖೆ ನಿರ್ದೇಶನದಂತೆ ಜಿಲ್ಲೆ ಕಾರ್ಮಿಕ ಇಲಾಖೆಯು ವಲಸೆ ಕಾರ್ಮಿಕರಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಕುಳೂರು ಪ್ರದೇಶದಲ್ಲಿ ಈ ದಿನ ಒಂದು ವದಂತಿ ಮೇರೆಗೆ ಜನಜಂಗುಳಿ ಸೇರಿದ್ದು, ಗಮನಕ್ಕೆ ಬಂದಿದೆ. ಕಾರ್ಮಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಸಾಮಾಜಿಕ ಅಂತರ ಕಾಪಾಡಿ ಮಾಹಿತಿ ನೀಡಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.

www.bantwalnews.com Editor: Harish Mambady

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜನಧನ ಖಾತೆ ಹಣ ವಾಪಸ್ ಹೋಗಲ್ಲ: ವದಂತಿಗಳಿಗೆ ಕಿವಿಗೊಡಬೇಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*