ವಲಸೆ ಕಾರ್ಮಿಕರು ಇರುವ ಬರಿಮಾರು, ಪಲ್ಲಿಪ್ಪಾಡಿ, ಕರಿಯಂಗಳ, ಕುಡ್ತಮುಗೇರು, ಸಾಲೆತ್ತೂರು, ಬಂಟ್ವಾಳ ಕಡೆಗಳಿಗೆಲ್ಲ ಬಂಟ್ವಾಳ ವೃತ್ತನಿರೀಕ್ಷಕ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ಪೊಲೀಸರ ತಂಡ ಬುಧವಾರ ಪರಿಶೀಲನೆ ನಡೆಸಿತು. ಈಗಾಗಲೇ ಸಾಲೆತ್ತೂರಿನಲ್ಲಿ ಸ್ಥಳೀಯ ಪಂಚಾಯಿತಿ ಮೂಲಕ ವಲಸೆ ಕೂಲಿ ಕಾರ್ಮಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ಒದಗಿಸಲಾಗಿದ್ದು, ಹೆಚ್ಚಿನ ನೆರವಾಗಿ ವಿಟ್ಲ ಠಾಣಾಧಿಕಾರಿ ವಿನೋದ್ ರೆಡ್ಡಿ ಅವರೂ ಬಂಟ್ವಾಳ ವೃತ್ತ ನೀರಿಕ್ಷಕರಾದ ಟಿ,ಡಿ ನಾಗರಾಜ್ ನೇತೃತ್ವದಲ್ಲಿ ಆಹಾರ ಕಿಟ್ ವಿತರಿಸಿದರು. ಪೋಲಿಸ್ ಸಿಬ್ಬಂದಿಗಳಾದ ಲೋಕೆಶ್, ಸತೀಶ್, ಯೋಗೇಶ್ ಹಾಗೂ ಕೊಳ್ನಾಡು ಬೀಟ್ ಸಿಬ್ಬಂದಿ ಅಶೋಕ್ ಕುಮಾರ್ ಉಪಸ್ಥಿತರಿದ್ದರು.
www.bantwalnews.com Editor: Harish Mambady
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)