ಸಂಕಷ್ಟಕ್ಕೊಳಗಾದ 21 ಕುಟುಂಬಗಳಿಗೆ ಸ್ವಂತ ಹಣ ಮೂಲಕ ನೆರವಾದ ಪೊಲೀಸ್ ಸಿಬ್ಬಂದಿ ಸೋಮನ ಗೌಡ ಚೌಧುರಿ – covid warrior

  • ಸಿಟಿ ಪೊಲೀಸರಿಂದ ಅವರಿಗೆ ದಿನದ ಕೋವಿಡ್ ಸೇನಾನಿ ಬಿರುದು

ಜಾಹೀರಾತು

ಲಾಕ್​​ಡೌನ್ ಸಮಸ್ಯೆಗೊಳಗಾದ 21 ಕುಟುಂಬಗಳಿಗೆ ಸ್ವತಃ ತಮ್ಮ ಹಣದಲ್ಲಿಯೇ ಮಂಗಳೂರಿನ ಪೊಲೀಸ್​ ಸಿಬ್ಬಂದಿಯೊಬ್ಬರು ಆಹಾರ ಕಿಟ್ ಮನೆಮನೆಗೆ ತೆರಳಿ ತಲುಪಿಸುವ ಕಾರ್ಯ ಮಾಡುತ್ತಿದ್ದು ಶ್ಲಾಘನೆಗೆ ಪಾತ್ರರಾಗಿದ್ದಾರೆ. ಅವರಿಗೆ ಮಂಗಳೂರು ಸಿಟಿ ಪೊಲೀಸರು ದಿನದ ಕೋವಿಡ್ ಸೇನಾನಿ ಎಂಬ ಬಿರುದು ನೀಡಿದ್ದಾರೆ.

ಸೋಮನ ಗೌಡ ಚೌಧರಿ ಅವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ಕಳೆದ 43 ತಿಂಗಳುಗಳಿಂದ ತನ್ನದೇ ಅದ ವಿಶೇಷ ಸೇವಾ ಯೋಜನೆಯ ಮೂಲಕ ಸಮಾಜದ ಅಶಕ್ತರಿಗೆ ನೆರವಾಗುತ್ತ ಬಂದಿದ್ದು ಸುಮಾರು 30 ಲಕ್ಷ ಅಧಿಕ ನೆರವನ್ನು ನೀಡಿದೆ. ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) 180 ಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿಗಳನ್ನು ಯಾವುದೇ ಪ್ರಚಾರವಿಲ್ಲದೆ ಕಳೆದ 5 ಹಂತದಲ್ಲಿ ವಿತರಣೆ ಮಾಡುತ್ತ ಬಂದಿತ್ತು. ಇಂಥ ಸಂದರ್ಭ, ಮಂಗಳೂರು ಸಿ.ಎ ಆರ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಜಯಪುರ ಮೂಲದ ಸೋಮನ ಗೌಡ ಚೌಧರಿಯವರು. ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ನ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ ಕಾರ್ಯವನ್ನು ಮೆಚ್ಚಿ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ ) ಸಂಸ್ಥೆಯ ಮೂಲಕ 21 ಬಡ ಕುಟುಂಬಗಳಿಗೆ ತಮ್ಮ ಸ್ವಂತ ಹಣದಲ್ಲಿ ಅಕ್ಕಿ ಮತ್ತು ಅಗತ್ಯ ದಿನಸಿ ಸಾಮಾಗ್ರಿಗಳನ್ನು ಸ್ವತಃ ಅವರೇ ಮನೆ ಮನೆ ತೆರಳಿ ವಿತರಣೆ ಮಾಡುವುದರ ಮೂಲಕ ಸಮಾಜಕ್ಕೆ ಪ್ರೇರಣೆಯಾದರು. ಈ ಸಮಯದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಪ್ರಶಾಂತ್ ಪೂಜಾರಿ ಮತ್ತು ಮಹಾಂತೇಶ್  ಹಾಗೂ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ನ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.

www.bantwalnews.com Editor: Harish Mambady

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಂಕಷ್ಟಕ್ಕೊಳಗಾದ 21 ಕುಟುಂಬಗಳಿಗೆ ಸ್ವಂತ ಹಣ ಮೂಲಕ ನೆರವಾದ ಪೊಲೀಸ್ ಸಿಬ್ಬಂದಿ ಸೋಮನ ಗೌಡ ಚೌಧುರಿ – covid warrior"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*