ಜಿಲ್ಲಾ ಸುದ್ದಿ

ಸಂಕಷ್ಟಕ್ಕೊಳಗಾದ 21 ಕುಟುಂಬಗಳಿಗೆ ಸ್ವಂತ ಹಣ ಮೂಲಕ ನೆರವಾದ ಪೊಲೀಸ್ ಸಿಬ್ಬಂದಿ ಸೋಮನ ಗೌಡ ಚೌಧುರಿ – covid warrior

  • ಸಿಟಿ ಪೊಲೀಸರಿಂದ ಅವರಿಗೆ ದಿನದ ಕೋವಿಡ್ ಸೇನಾನಿ ಬಿರುದು

ಜಾಹೀರಾತು

ಲಾಕ್​​ಡೌನ್ ಸಮಸ್ಯೆಗೊಳಗಾದ 21 ಕುಟುಂಬಗಳಿಗೆ ಸ್ವತಃ ತಮ್ಮ ಹಣದಲ್ಲಿಯೇ ಮಂಗಳೂರಿನ ಪೊಲೀಸ್​ ಸಿಬ್ಬಂದಿಯೊಬ್ಬರು ಆಹಾರ ಕಿಟ್ ಮನೆಮನೆಗೆ ತೆರಳಿ ತಲುಪಿಸುವ ಕಾರ್ಯ ಮಾಡುತ್ತಿದ್ದು ಶ್ಲಾಘನೆಗೆ ಪಾತ್ರರಾಗಿದ್ದಾರೆ. ಅವರಿಗೆ ಮಂಗಳೂರು ಸಿಟಿ ಪೊಲೀಸರು ದಿನದ ಕೋವಿಡ್ ಸೇನಾನಿ ಎಂಬ ಬಿರುದು ನೀಡಿದ್ದಾರೆ.

ಸೋಮನ ಗೌಡ ಚೌಧರಿ ಅವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ಕಳೆದ 43 ತಿಂಗಳುಗಳಿಂದ ತನ್ನದೇ ಅದ ವಿಶೇಷ ಸೇವಾ ಯೋಜನೆಯ ಮೂಲಕ ಸಮಾಜದ ಅಶಕ್ತರಿಗೆ ನೆರವಾಗುತ್ತ ಬಂದಿದ್ದು ಸುಮಾರು 30 ಲಕ್ಷ ಅಧಿಕ ನೆರವನ್ನು ನೀಡಿದೆ. ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) 180 ಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿಗಳನ್ನು ಯಾವುದೇ ಪ್ರಚಾರವಿಲ್ಲದೆ ಕಳೆದ 5 ಹಂತದಲ್ಲಿ ವಿತರಣೆ ಮಾಡುತ್ತ ಬಂದಿತ್ತು. ಇಂಥ ಸಂದರ್ಭ, ಮಂಗಳೂರು ಸಿ.ಎ ಆರ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಜಯಪುರ ಮೂಲದ ಸೋಮನ ಗೌಡ ಚೌಧರಿಯವರು. ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ನ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ ಕಾರ್ಯವನ್ನು ಮೆಚ್ಚಿ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ ) ಸಂಸ್ಥೆಯ ಮೂಲಕ 21 ಬಡ ಕುಟುಂಬಗಳಿಗೆ ತಮ್ಮ ಸ್ವಂತ ಹಣದಲ್ಲಿ ಅಕ್ಕಿ ಮತ್ತು ಅಗತ್ಯ ದಿನಸಿ ಸಾಮಾಗ್ರಿಗಳನ್ನು ಸ್ವತಃ ಅವರೇ ಮನೆ ಮನೆ ತೆರಳಿ ವಿತರಣೆ ಮಾಡುವುದರ ಮೂಲಕ ಸಮಾಜಕ್ಕೆ ಪ್ರೇರಣೆಯಾದರು. ಈ ಸಮಯದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಪ್ರಶಾಂತ್ ಪೂಜಾರಿ ಮತ್ತು ಮಹಾಂತೇಶ್  ಹಾಗೂ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ನ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.

www.bantwalnews.com Editor: Harish Mambady

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.