ಬಂಟ್ವಾಳ

ಮಂಗಳೂರು ಮಹಾನಗರಕ್ಕೆ ಈ ಬಾರಿ ನೀರಿನ ಕೊರತೆ ಇಲ್ಲ, ರೇಷನಿಂಗ್ ಅವಶ್ಯಕತೆ ಇಲ್ಲ

  • ತುಂಬೆ ಡ್ಯಾಂ ಪರಿಶೀಲನೆ ಬಳಿಕ ಮೇಯರ್ ದಿವಾಕರ್ ಪಾಂಡೇಶ್ವರ, ಕಮೀಷನರ್ ಅಜಿತ್ ಹೆಗ್ಡೆ ಅಭಿಪ್ರಾಯ

ಬಂಟ್ವಾಳನ್ಯೂಸ್ , ಸಂಪಾದಕ : ಹರೀಶ ಮಾಂಬಾಡಿ

ಜಾಹೀರಾತು

ಮಂಗಳೂರಿಗೆ ನೀರೊದಗಿಸುವ ಬಂಟ್ವಾಳದ ತುಂಬೆ ವೆಂಟೆಡ್ ಡ್ಯಾಂನಲ್ಲಿ 6 ಮೀಟರ್ ನೀರು ಸಂಗ್ರಹವಾಗಿದ್ದು, ಕಳೆದ ಎರಡು ದಿನಗಳಿಂದ ಶಂಭೂರು ಎಎಂಆರ್ ಡ್ಯಾಂನಿಂದ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಮಾರು 50 ದಿನಗಳಿಗೆ ಬೇಕಾಗುವ ನೀರು ಇಲ್ಲಿ ಸಂಗ್ರಹಗೊಂಡಿದ್ದು, ಈ ಬಾರಿ ಜನತೆ ನೀರಿನ ಸಂಕಷ್ಟ ಅನುಭವಿಸಬೇಕಾಗಿಲ್ಲ, ರೇಷನಿಂಗ್ ಮಾಡುವ ಅವಶ್ಯಕತೆಯೂ ಇರುವುದಿಲ್ಲ ಎಂದು ಮಂಗಳೂರು ಮೇಯರ್ ದಿವಾಕರ ಪಾಂಡೇಶ್ವರ ಹೇಳಿದ್ದಾರೆ.

ಗುರುವಾರ ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವರ್ಷ ಮಂಗಳೂರಿನ ಜನತೆಗೆ ನೀರಿನ ಅಭಾವ ಬರುವುದಿಲ್ಲ. ಕಳೆದ ವರ್ಷ ಈ ಸಮಯಕ್ಕೆ ರೇಷನಿಂಗ್ ವ್ಯವಸ್ಥೆಯ ಮೂಲಕ ಎರಡು ದಿನಕ್ಕೊಮ್ಮೆ ನೀರು ನೀಡಲಾಗುತ್ತಿತ್ತು ಎಂದು ತಿಳಿಸಿದರು.   ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಮಾತನಾಡಿ  ಜೂನ್‌ಗಿಂತ ಮೊದಲು ಮಳೆ ಬಂದರೆ ಯಥೇಚ್ಛವಾಗಿ ನೀರು ಸಿಗಲಿದೆ. ನೀರಿನ ಲಭ್ಯತೆಯ ಬಗ್ಗೆ ಜನರಿಗೆ ಆತಂಕ ಬೇಡ ಎಂದರು. ಸಹಾಯಕ ಕಮೀಷನರ್ ಡಾ. ಸಂತೋಷ್, ಇಇ ರವಿಶಂಕರ್, ಎಇಇ ನರೇಶ್ ಶೆಣೈ, ಜೆಇ ರಿಚ್ಚಾರ್ಡ್ ಮೊದಲಾದವರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts