ತಾಪಂ, ಪುರಸಭೆ ವ್ಯಾಪ್ತಿಯ ಎಲ್ಲ ತರಕಾರಿ, ದಿನಸಿ ಅಂಗಡಿಗಳಿಗೂ ನಿಯಮ ಅನ್ವಯ
ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಬರುವ ದಿನಸಿ ಅಂಗಡಿಗಳಲ್ಲಿ ಮತ್ತು ತರಕಾರಿ ಅಂಗಡಿಗಳಲ್ಲಿ ದಿನಸಿ ಸಾಮಗ್ರಿಗಳಿಗೆ ಮತ್ತು ತರಕಾರಿ ವಸ್ತುಗಳಿಗೆ ನಾನಾ ತರದ ದರಗಳನ್ನು ಸಾರ್ವಜನಿಕರಿಂದ ವಸೂಲು ಮಾಡುವ ಕುರಿತು ದೂರುಗಳು ಬಂದಿವೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್. ತಿಳಿಸಿದ್ದು, ಈ ಕುರಿತು ದರಪಟ್ಟಿಯನ್ನು ತರಕಾರಿ ಮತ್ತು ದಿನಸಿ ಅಂಗಡಿಗಳಲ್ಲಿ ಕಡ್ಡಾಯ ಅಳವಡಿಸಲು ಸೂಚಿಸಿದ್ದಾರೆ.
ಜಾಹೀರಾತು
ಈ ಬಗ್ಗೆ ತಾಪಂ ಕಾರ್ಯನಿರ್ವಹಣಾಧಿಕಾರಿ ಮತ್ತು ಬಂಟ್ವಾಳ ಪುರಸಭೆಗೆ ಪತ್ರವನ್ನು ಕಳುಹಿಸಲಾಗಿದ್ದು, ಪಿಡಿಒಗಳ ಮೂಲಕ ಮಾಲೀಕರಿಗೆ ಸೂಚನೆ ನೀಡುವಂತೆ ಕೋರಲಾಗಿದೆ. ದರಪಟ್ಟಿಗಳಲ್ಲಿರುವುದನ್ನು ಬಿಟ್ಟು ಹೆಚ್ಚುವರಿ ದರ ವಸೂಲು ಮಾಡುವುದು ಕಂಡುಬಂದರೆ, ಅಂಥ ಅಂಗಡಿ ಮಾಲೀಕರ ವಿರುದ್ಧ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ರಶ್ಮಿಎಸ್.ಆರ್. ಎಚ್ಚರಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ತಾಲೂಕಿನ ಎಲ್ಲ ತರಕಾರಿ, ದಿನಸಿ ಅಂಗಡಿಗಳಲ್ಲೂ ದರಪಟ್ಟಿ ಕಡ್ಡಾಯ – ತಹಸೀಲ್ದಾರ್ ಸೂಚನೆ"
Be the first to comment on "ತಾಲೂಕಿನ ಎಲ್ಲ ತರಕಾರಿ, ದಿನಸಿ ಅಂಗಡಿಗಳಲ್ಲೂ ದರಪಟ್ಟಿ ಕಡ್ಡಾಯ – ತಹಸೀಲ್ದಾರ್ ಸೂಚನೆ"