ಜಿಲ್ಲಾ ಸುದ್ದಿ

ಬೀಡಿ ಉದ್ಯಮ ಸೋಮವಾರ ಪುನರಾರಂಭ: ಸಚಿವ ಕೋಟ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ (.20) ಬೀಡಿ ಉದ್ಯಮ ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಾಹೀರಾತು

 ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀಡಿ ಕಂಪೆನಿಗಳ ಮಾಲೀಕರು, ಬೀಡಿ ಕಾರ್ಮಿಕ ಮುಖಂಡರ ಜತೆ ಸಭೆ ನಡೆಸಿ ಮಾತನಾಡುತ್ತಿದ್ದರು. .. ಜಿಲ್ಲೆಯಲ್ಲಿ 1.90 ಲಕ್ಷ ಹಾಗೂ ಉಡುಪಿ ಜಿಲ್ಲೆಯಲ್ಲಿ 21 ಸಾವಿರದಷ್ಟು ಬೀಡಿ ಕಾರ್ಮಿಕರಿದ್ದಾರೆ. ಕೋರೋನಾ ಹಿನ್ನೆಲೆಯಲ್ಲಿ ಬೀಡಿ ಉದ್ಯಮ ಸಂಪೂರ್ಣ ಸ್ಥಗಿತಗೊಂಡಿದ್ದು, ಬಡವರ ಜೀವನಾಧಾರಕ್ಕೆ ಸಮಸ್ಯೆಯಾಗಿರುವುದು ಸರಕಾರದ ಗಮನಕ್ಕೆ ಬಂದಿದೆ. ಹಿನ್ನಲೆಯಲ್ಲಿ ಸೋಮವಾರದಿಂದಲೇ ಬೀಡಿ ಉದ್ಯಮ ಪುನರಾರಂಭಗೊಳ್ಳಲಿದೆ. ಕಾರ್ಮಿಕರಿಗೆ ಶೇಕಡಾ 50 ರಷ್ಟು ಕೆಲಸ ನೀಡಲು ಮಾಲೀಕರು ಒಪ್ಪಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದರು.

 ಬೀಡಿ ಕಾರ್ಮಿಕರಿಗೆ ಪ್ರತೀ ವರ್ಷ ಅಷ್ಟಮಿ ಅಥವಾ ಚೌತಿ ಸಂದರ್ಭ ಬೋನಸ್ ನೀಡಲಾಗುತ್ತಿದೆ. ಸಲ ಇದನ್ನು ಸ್ವಲ್ಪ ಬೇಗನೇ ನೀಡುವಂತೆ ಮಾಲೀಕರನ್ನು ಕೋರಲಾಗಿದೆ. ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವುದಾಗಿ ಮಾಲೀಕರು ತಿಳಿಸಿದ್ದಾರೆ ಎಂದು ಸಚಿವ ಕೋಟ ತಿಳಿಸಿದರು.

 15 ದಿನ ಬಿಟ್ಟು ಮತ್ತೆ ಸಭೆ ಸೇರಿ ಬೀಡಿ ಉದ್ಯಮ ಪ್ರಗತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವರು ಹೇಳಿದರು.

ಜಾಹೀರಾತು

 ಸಭೆಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ