ದಕ್ಷಿಣ ಕನ್ನಡ: ಇವತ್ತು ಯಾವುದೇ ಕೊರೊನಾ ಕೇಸ್ ಇಲ್ಲ

ಪರೀಕ್ಷೆಗೆಂದು 865 ಮಂದಿಯ ಗಂಟಲು ದ್ರವ ಮಾದರಿ ಕಳುಹಿಸಲಾಗಿದೆ. ಇವುಗಳ ಪೈಕಿ 720 ಮಂದಿಯ ಫಲಿತಾಂಶ ಇದುವರೆಗೆ ಬಂದಿದ್ದು, 707 ನೆಗೆಟಿವ್, 13 ಪಾಸಿಟಿವ್. ಇವರ ಪೈಕಿ 12 ಮಂದಿ ಗುಣಮುಖ, ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ 7 ಮಂದಿಯ ಫಲಿತಾಂಶ ಗೊತ್ತಾಗಿದ್ದು, ಎಲ್ಲವೂ ನೆಗೆಟಿವ್. ಇನ್ನು ಒಟ್ಟು 145 ಮಂದಿಯ ಗಂಟಲು ದ್ರವ ಮಾದರಿಯ ಫಲಿತಾಂಶ ಬರಲು ಬಾಕಿ ಇದೆ.

ಜಾಹೀರಾತು

ಇದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಶನಿವಾರ ಹೊರಡಿಸಿದ ಕೊರೊನಾ ಕುರಿತ ಜಿಲ್ಲೆಯ ಸ್ಥಿತಿಗತಿ ಕುರಿತ ಪ್ರಕಟಣೆ

5813 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದು ಅವರಲ್ಲಿ ಯಾವುದೇ ರೋಗ ಲಕ್ಷಣಗಳು ಇಲ್ಲ. ಫಿವರ್ ಕ್ಲಿನಿಕ್ಗಳಲ್ಲಿ ಒಟ್ಟು 498 ಮಂದಿ ತಪಾಸಣೆ ನಡೆಸಲಾಗಿದೆ.

ಏ.17ರಂದು ದ.ಕ.ಜಿಲ್ಲೆಯಲ್ಲಿ ಸೋಂಕು ದೃಢಪಟ್ಟಿರುವ ವ್ಯಕ್ತಿ ಮಾರ್ಚ್ 20ರಂದು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಮಂಗಳೂರಿಗೆ ಭಾರತಿ ಟ್ರಾವೆಲ್ಸ್ ಬಸ್ ನಂ.ಕೆಎ51ಎಡಿ5832ನಲ್ಲಿ ಪ್ರಯಾಣಿಸಿದ್ದು, ಈ ಬಸ್ಸಿನಲ್ಲಿ ಪ್ರಯಾಣಿಸಿದ ಎಲ್ಲ 32 ಮಂದಿಯೂ ತಮ್ಮ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಪರಿಕ್ಷೆ ಮಾಡಿಸಿಕೊಳ್ಳಬೇಕು ಎಂದು ವಿನಂತಿಸಿದ್ದಾರೆ.

ಜಾಹೀರಾತು

CONTANIMENT ZONE: ದ.ಕ. ಜಿಲ್ಲೆಯ 7 ಗ್ರಾಮಗಳನ್ನು containment Zone ಹಾಗೂ Incident Commander ಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳ ಆದೇಶ – ತುಂಬೆ, ಸಜೀಪನಡು, ಬೆಳ್ತಂಗಡಿಯ ಕರಾಯ, ತೊಕ್ಕೊಟ್ಟು, ಅಜ್ಜಾವರ, ಸಂಪ್ಯ ಮತ್ತು ಉಪ್ಪಿನಂಗಡಿ.

 ದ.ಕ.ಜಿಲ್ಲೆಯ ಸಜೀಪನಡು, ತುಂಬೆ ಗ್ರಾಮಗಳು, ಬೆಳ್ತಂಗಡಿಯ ಜನತಾ ಕಾಲೊನಿ-ಕರಯ ಗ್ರಾಮ, ಉಪ್ಪಿನಂಗಡಿ,  ಸ್ಮಾರ್ಟ್ ಪ್ಲಾನೆಟ್, ತೊಕ್ಕೊಟ್ಟು, ಪುತ್ತೂರು ತಾಲೂಕಿನ ಸಂಪ್ಯಮನೆ ಮತ್ತು ಸುಳ್ಯ ತಾಲೂಕಿನ  ಅಜ್ಜಾವರ ಗ್ರಾಮಗಳ ಪ್ರದೇಶವನ್ನು CONTAINMENT ZONE ಎಂದು ಗುರುತಿಸಲಾಗಿದೆ. ಈಗಾಗಲೇ ಇಲ್ಲಿ ಸಂಪೂರ್ಣ ನಿರ್ಬಂಧ ವಿಧಿಸಲಾಗಿದ್ದು, ಜನರ ಆರೋಗ್ಯ, ಇತರೆ ಸೌಲಭ್ಯ ಒದಗಿಸಲು ಹಾಗೂ ನಿರ್ಬಂಧ ನಿಯಮ ಅನುಷ್ಠಾನಗೊಳಿಸಲು ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಲು ಇನ್ಸಿಡೆಂಟ್ ಕಮಾಂಡರ್ ಗಳ ನೇಮಕಾತಿ ಮಾಡಲಾಗಿದ್ದಾಗಿ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದಕ್ಷಿಣ ಕನ್ನಡ: ಇವತ್ತು ಯಾವುದೇ ಕೊರೊನಾ ಕೇಸ್ ಇಲ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*