ಈಗಾಗಲೇ ಮಹಾಮಾರಿ ಕೊರೊನ ಖಾಯಿಲೆಗೆ ಬಂಟ್ವಾಳ ಮೂಲದ ಮಹಿಳೆಯೋರ್ವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕೆಲವರು ಮಹಿಳೆಯ ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದ್ದು, ಈ ರೀತಿ ಭಾವಚಿತ್ರ ವನ್ನು ಜಾಲತಾಣಗಳಲ್ಲಿ ಹರಿಯಬಿಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದ್ದು, ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಈಗಾಗಲೇ ಇಲಾಖೆಯು ಮಹಿಳೆಯ ಭಾವಚಿತ್ರ ಹರಡುತ್ತಿರುವವರ ಮಾಹಿತಿ ಕಲೆ ಹಾಕುತ್ತಿದ್ದು, ಸದ್ಯ ಅಂಥವರನ್ನು ಕಾನೂನಿನ ಅಡಿಯಲ್ಲಿ ಒಳಪಡಿಸುವ ಪ್ರಕ್ರಿಯೆ ಪ್ರಾರಂಭಿಸಿದೆ. ಆದ್ದರಿಂದ ಕೂಡಲೇ ಮಹಿಳೆಯ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿದರೆ ಒಳ್ಳೆಯದು. ಇಲ್ಲವಾದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂಬ ಮಾಹಿತಿ ಪೊಲೀಸ್ ಇಲಾಖೆಯಿಂದ ಹೊರಡಿಸಲಾಗಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)