ಪ್ರಮುಖ ಸುದ್ದಿಗಳು

ಜ್ವರ ಕೆಮ್ಮು, ಉಸಿರಾಟದ ತೊಂದರೆ – ಫೀವರ್ ಕ್ಲಿನಿಕ್ ಸಂಪರ್ಕಿಸಲು ಸೂಚನೆ

ಸಾರ್ವಜನಿಕರು ತಮಗೆ ಜ್ವರ, ಕೆಮ್ಮ, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫೀವರ್ ಕ್ಲಿನಿಕ್ ಸಂಪರ್ಕಿಸಲು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿರುವ ಜಿಲ್ಲಾಧಿಕಾರಿ ಸಿಂಧು ರೂಪೇಶ್, ಕೋವಿಡ್ ಪರೀಕ್ಷೆಗೊಳಪಡಿಸುವ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೋಗ್ಯ ಸಮಸ್ಯೆಗಳ ಮಾಹಿತಿಯನ್ನು  ಅಧಿಕಾರಿಗಳೊಂದಿಗೆ  ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ ಎಂದಿದ್ದಾರೆ.

ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ನೀಡಲು ಈಗಾಗಲೇ ಆದೇಶಿಸಲಾಗಿದೆ. ಅದರಂತೆ ಎಲ್ಲಾ ಖಾಸಗಿ ವೈದ್ಯಾಧಿಕಾರಿಗಳು ಸಹ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದವರು ಎಚ್ಚರಿಸಿದ್ದಾರೆ.

ಜಾಹೀರಾತು

ಪರೀಕ್ಷೆಗೊಳಪಟ್ಟವರ ಮಾಹಿತಿ ಬಹಿರಂಗ ಇಲ್ಲ:

ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ, ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ.

ವಿದೇಶದಿಂದ ಆಗಮಿಸುವವರ ಮಾಹಿತಿ ನೀಡಿ: ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವವರ ಮಾಹಿತಿಯನ್ನು ನೀಡುವುದು ಸಾರ್ವಜನಿಕರ ಆದ್ಯ ಕರ್ತವ್ಯವಾಗಿರುತ್ತದೆ.

1077ಕ್ಕೆ ಕಾಲ್ ಮಾಡಿ: ತಮ್ಮ ಕುಟುಂಬದಲ್ಲಿ ಯಾರಿಗಾದರೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ತಿಳಿಸಲಾಗಿದೆ. ಈ ರೀತಿ ತ್ವರಿತವಾಗಿ ಮಾಹಿತಿಯನ್ನು ನೀಡುವುದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆತು ಗುಣಪಡಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತವು ಫೆಬ್ರವರಿ 2020 ರಿಂದಲೇ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕೋವಿಡ್-19 ರ ನಿಯಂತ್ರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ವಿದೇಶೀ ಪ್ರಯಾಣದ ಇತಿಹಾಸ ಹೊಂದಿರುವ ಪ್ರತಿಯೊಂದು ಮನೆಯ ಮಾಹಿತಿಯನ್ನು ಕಲೆ ಹಾಕಿ ಗೃಹ ನಿಗಾವಣೆ ಯಲ್ಲಿರುವವರನ್ನು ಸಂಪರ್ಕಿಸಿ, ಅವರ ಆರೋಗ್ಯ ವಿಷಯದ ಬಗ್ಗೆ ಹೆಚ್ಚಿನ ಗಮನವನ್ನು ವಹಿಸಲಾಗುತ್ತಿದೆ ಎಂದಿದ್ದಾರೆ.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.