ಕಲ್ಲಡ್ಕ

ಅಮ್ಟೂರು: 225 ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ

ಜಾಹೀರಾತು

ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪ ಅಮ್ಟೂರು ಎಂಬಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಸಹಕಾರದೊಂದಿಗೆ ಊರ ದಾನಿಗಳ ಸಹಾಯದಿಂದ ಬಿಜೆಪಿಯ 182ನೇ ಬೂತ್ ಸಮಿತಿ ನೇತೃತ್ವದಲ್ಲಿ 225 ಬಡ ಕುಟುಂಬಗಳಿಗೆ ಅಕ್ಕಿ ವಿತರಿಸಲಾಯಿತು.

ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ರಮೇಶ್ ಶೆಟ್ಟಿಗಾರ್, ಬಿಜೆಪಿಯ ಪ್ರಮುಖರಾದ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬೂತ್ ಸಮಿತಿಯ ಅಧ್ಯಕ್ಷರಾದ ಬೈದರಡ್ಕ ಪ್ರಭಾಕರ್ ಶೆಟ್ಟಿ, ಗ್ರಾಪಂ ಸದಸ್ಯರಾದ ಗೋಪಾಲ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾದ ವೇಣು ಗೋಪಾಲ್ ಶೆಟ್ಟಿಗಾರ್, ಕಾರ್ಯದರ್ಶಿಯಾದ ಪುರುಷೋತ್ತಮ ಶಾಂತಿಪಳಿಕೆ, ಜಿತೇಶ್ ಶೆಟ್ಟಿ  ಬಾಳಿಕೆ, ಶ್ರೀರಾಮ ವಿದ್ಯಾ ಕೇಂದ್ರದ ಕುಶಾಲಪ್ಪ ಅಮ್ಟೂರು, ಪುರುಷೋತ್ತಮ ಟೈಲರ್, ದಿವಾಕರ ಪೂಜಾರಿ, ಹರೀಶ್ ಬಟ್ಟೆಹಿತಲು, ಕೌಶಲ್ ಶೆಟ್ಟಿ ಹಾಗೂ ಊರಿನ ದಾನಿಗಳು, ಶ್ರೀಕೃಷ್ಣ ಭಜನಾ ಮಂದಿರದ ಪದಾಧಿಕಾರಿಗಳು, ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ದಿನೇಶ್ ಅಮ್ಟೂರು, ಸಂಕಷ್ಟದ ಈ ಸನ್ನಿವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಕೊರೊನಾದಿಂದ ಸಂಕಷ್ಟಕ್ಕೊಳಗಾದವರಿಗೆ ನೆರವಾಗುವುದರ ಜೊತೆಗೆ ಸರಕಾರಕ್ಕೆ ಪೂರಕವಾಗಿ ಜನರಿಗೆ ನೆರವಾಗೋಣ ಎಂದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts