ಕಲ್ಲಡ್ಕ

ಅಮ್ಟೂರು: 225 ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ

ಜಾಹೀರಾತು

ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪ ಅಮ್ಟೂರು ಎಂಬಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಸಹಕಾರದೊಂದಿಗೆ ಊರ ದಾನಿಗಳ ಸಹಾಯದಿಂದ ಬಿಜೆಪಿಯ 182ನೇ ಬೂತ್ ಸಮಿತಿ ನೇತೃತ್ವದಲ್ಲಿ 225 ಬಡ ಕುಟುಂಬಗಳಿಗೆ ಅಕ್ಕಿ ವಿತರಿಸಲಾಯಿತು.

ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ರಮೇಶ್ ಶೆಟ್ಟಿಗಾರ್, ಬಿಜೆಪಿಯ ಪ್ರಮುಖರಾದ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬೂತ್ ಸಮಿತಿಯ ಅಧ್ಯಕ್ಷರಾದ ಬೈದರಡ್ಕ ಪ್ರಭಾಕರ್ ಶೆಟ್ಟಿ, ಗ್ರಾಪಂ ಸದಸ್ಯರಾದ ಗೋಪಾಲ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾದ ವೇಣು ಗೋಪಾಲ್ ಶೆಟ್ಟಿಗಾರ್, ಕಾರ್ಯದರ್ಶಿಯಾದ ಪುರುಷೋತ್ತಮ ಶಾಂತಿಪಳಿಕೆ, ಜಿತೇಶ್ ಶೆಟ್ಟಿ  ಬಾಳಿಕೆ, ಶ್ರೀರಾಮ ವಿದ್ಯಾ ಕೇಂದ್ರದ ಕುಶಾಲಪ್ಪ ಅಮ್ಟೂರು, ಪುರುಷೋತ್ತಮ ಟೈಲರ್, ದಿವಾಕರ ಪೂಜಾರಿ, ಹರೀಶ್ ಬಟ್ಟೆಹಿತಲು, ಕೌಶಲ್ ಶೆಟ್ಟಿ ಹಾಗೂ ಊರಿನ ದಾನಿಗಳು, ಶ್ರೀಕೃಷ್ಣ ಭಜನಾ ಮಂದಿರದ ಪದಾಧಿಕಾರಿಗಳು, ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ದಿನೇಶ್ ಅಮ್ಟೂರು, ಸಂಕಷ್ಟದ ಈ ಸನ್ನಿವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಕೊರೊನಾದಿಂದ ಸಂಕಷ್ಟಕ್ಕೊಳಗಾದವರಿಗೆ ನೆರವಾಗುವುದರ ಜೊತೆಗೆ ಸರಕಾರಕ್ಕೆ ಪೂರಕವಾಗಿ ಜನರಿಗೆ ನೆರವಾಗೋಣ ಎಂದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.