ರಿಲ್ಯಾಕ್ಸ್ ಅವಧಿಯಲ್ಲಿ ಓಡಾಟ ನಡೆಸಿದರೆ ಉದ್ದೇಶ ಈಡೇರದು, ಕಟ್ಟುನಿಟ್ಟಿನ ಬಂದ್ ಅಗತ್ಯ

ಕೊರೊನಾ ತಡೆಗಟ್ಟಲು ಸರಕಾರ ಈಗ ಕೈಗೊಂಡಿರುವ ಕ್ರಮಗಳು ಗೊತ್ತೇ ಇದೆ. ಇದಕ್ಕೆ ಪೂರಕವಾಗಿ ನಿಮ್ಮ ಅನಿಸಿಕೆ ಏನು? bantwalnews@gmail.com ಈ ಈಮೈಲ್ ವಿಳಾಸಕ್ಕೆ ಬರೆದು ಕಳುಹಿಸಿ. ಉತ್ತಮವಾದದ್ದನ್ನು ಪ್ರಕಟಿಸಲಾಗುವುದು. ಇಲ್ಲಿದೆ ನಿಮ್ಮ ಧ್ವನಿ.

ಜಾಹೀರಾತು

ಜಾಗತಿಕ ಮಹಾಮಾರಿ ಕೊರೊನಾ ವೈರಸನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರಕಾರ , ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಜನತಾ ಕರ್ಪ್ಯೂ , ದೇಶವ್ಯಾಪಿ ಲಾಕ್ ಡೌನ್ ಘೋಷಿಸುವ ಮೂಲಕ ಮಹತ್ವಪೂರ್ಣ ಹೆಜ್ಜೆ ಇರಿಸಿದೆ.

ಆದರೆ ಇದು ಎಷ್ಟೊಂದು ಪರಿಣಾಮಕಾರಿ ಫಲಿತಾಂಶ ನೋಡಬಹುದು ಅನ್ನುವುದರ ಬಗ್ಗೆ ಚಿಂತನೆ ಕೂಡ ಈಗಿಂದಾಗೇ ಮಾಡಬೇಕಾಗುತ್ತದೆ. ಯಾಕೆಂದರೆ ಕೊರೊನಾ ಖಾಯಿಲೆಯ ಬಗ್ಗೆ ಭಯಬಿದ್ದು ಇಂದು ಎಷ್ಟೋ ಜನ ಆಸ್ಪತ್ರೆಗೆ ಹೋಗುವುದಕ್ಕೂ ಹಿಂಜರಿದಿದ್ದಾರೆ. ಅದೆಷ್ಟೋ ಮಂದಿ ನೆಗಡಿ , ತಲೆನೋವು , ಜ್ವರ ಬಂದರೂ ಆಸ್ಪತ್ರೆಗೆ ಹೋಗದೆ ಮನೆಯಲ್ಲೇ ಉಳಿದುಕೊಂಡಿರುತ್ತಾರೆ. ಅದರಲ್ಲಿ ಎಷ್ಟು ಮಂದಿಗೆ ಕೊರೊನಾ ಸೋಂಕು ತಗುಲಿದೆಯೋ ಇಲ್ಲವೋ ಯಾರಿಗೂ ಗೊತ್ತಿರುವುದಿಲ್ಲ. ಆದ್ದರಿಂದ ಸರಕಾರ ಲಾಕ್ ಡೌನ್ ಮಾಡಿರುವ ಈ ಸಮಯದಲ್ಲಿ ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತರು , ವೈದ್ಯರು ಮತ್ತು ನರ್ಸ್ ಗಳ ಮೂಲಕ ಮನೆ ಮನೆಗೆ ಭೇಟಿ ಮಾಡಿಸಿ ಪರೀಕ್ಷಿಸುವಂತೆ ಮಾಡಬೇಕು.  

ಅಲ್ಲದೆ ದೈನಂದಿನ ಆಹಾರ ಪದಾರ್ಥಗಳನ್ನು ಪೂರೈಸುವುದಕ್ಕಾಗಿ ಬೆಳಿಗ್ಗೆ 7 ರಿಂದ 12 ರ ತನಕ ದಿನಸಿ ಅಂಗಡಿಗಳು ತೆರೆದಿಡುವುದು ಕೂಡ ಕೊರೋನಾ ತಡೆಗಟ್ಟುವಲ್ಲಿ ತೊಡಕಾಗುತ್ತಿದೆ. ಆದ್ದರಿಂದ ಸರಕಾರವೇ ಆಯಾ ಪ್ರದೇಶಗಳಲ್ಲಿ ಒಂದೆರಡು ದಿನಸಿ ಅಂಗಡಿಗಳನ್ನು ಗೊತ್ತು ಪಡಿಸಿ ಅವರ ಮೂಲಕ ಪ್ರತಿಯೊಬ್ಬರ ಮನೆಬಾಗಿಲಿಗೆ ಆಹಾರ ಸಾಮಾಗ್ರಿಗಳನ್ನು ಪೂರೈಸುವುದರ ಬಗ್ಗೆ ತುರ್ತು ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಕೊರೋನಾ ಸೋಂಕಿತರು ಅವರಿಗೆ ಗೊತ್ತಿಲ್ಲದೇ ಬೇರೆಯವರಿಗೂ ಪಸರಿಸುವ ಸಾಧ್ಯತೆ ಇದೆ. ಈ ಮೇಲಿನ ಎಲ್ಲಾ ಕ್ರಮಗಳನ್ನು ಕೈಗೊಂಡರೆ ಮಾತ್ರ ಪ್ರಧಾನಿಯವರ ಲಾಕ್ ಡೌನ್ ನಿರ್ದಾರ ಕೊರೋನಾ ನಿರ್ಮೂಲನೆಗೊಳಿಸುವ ಒಂದು ಪರಿಣಾಮಕಾರಿ ಕ್ರಾಂತಿಕಾರಿ ಹೆಜ್ಜೆಯಾಗಿ ಪರಿವರ್ತಿಸಬಹುದು. ಇಲ್ಲಂದ್ರೆ ವರ್ಷಪೂರ್ತಿ ಲಾಕ್ ಡೌನ್ ಮಾಡಿದರೂ ಯಾವುದೇ ಉಪಯೋಗವಾಗದು ಎಂಬುದು ನನ್ನ ಅನಿಸಿಕೆ.

ಜಾಹೀರಾತು

  • ಇಕ್ಬಾಲ್
  • ಭಾರತೀಯ ಮಾನವ ಹಕ್ಕು ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು , ದ.ಕ. ಜಿಲ್ಲೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಿಲ್ಯಾಕ್ಸ್ ಅವಧಿಯಲ್ಲಿ ಓಡಾಟ ನಡೆಸಿದರೆ ಉದ್ದೇಶ ಈಡೇರದು, ಕಟ್ಟುನಿಟ್ಟಿನ ಬಂದ್ ಅಗತ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*