ನಿಮ್ಮ ಧ್ವನಿ

ರಿಲ್ಯಾಕ್ಸ್ ಅವಧಿಯಲ್ಲಿ ಓಡಾಟ ನಡೆಸಿದರೆ ಉದ್ದೇಶ ಈಡೇರದು, ಕಟ್ಟುನಿಟ್ಟಿನ ಬಂದ್ ಅಗತ್ಯ

ಕೊರೊನಾ ತಡೆಗಟ್ಟಲು ಸರಕಾರ ಈಗ ಕೈಗೊಂಡಿರುವ ಕ್ರಮಗಳು ಗೊತ್ತೇ ಇದೆ. ಇದಕ್ಕೆ ಪೂರಕವಾಗಿ ನಿಮ್ಮ ಅನಿಸಿಕೆ ಏನು? bantwalnews@gmail.com ಈ ಈಮೈಲ್ ವಿಳಾಸಕ್ಕೆ ಬರೆದು ಕಳುಹಿಸಿ. ಉತ್ತಮವಾದದ್ದನ್ನು ಪ್ರಕಟಿಸಲಾಗುವುದು. ಇಲ್ಲಿದೆ ನಿಮ್ಮ ಧ್ವನಿ.

ಜಾಹೀರಾತು

ಜಾಗತಿಕ ಮಹಾಮಾರಿ ಕೊರೊನಾ ವೈರಸನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರಕಾರ , ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಜನತಾ ಕರ್ಪ್ಯೂ , ದೇಶವ್ಯಾಪಿ ಲಾಕ್ ಡೌನ್ ಘೋಷಿಸುವ ಮೂಲಕ ಮಹತ್ವಪೂರ್ಣ ಹೆಜ್ಜೆ ಇರಿಸಿದೆ.

ಆದರೆ ಇದು ಎಷ್ಟೊಂದು ಪರಿಣಾಮಕಾರಿ ಫಲಿತಾಂಶ ನೋಡಬಹುದು ಅನ್ನುವುದರ ಬಗ್ಗೆ ಚಿಂತನೆ ಕೂಡ ಈಗಿಂದಾಗೇ ಮಾಡಬೇಕಾಗುತ್ತದೆ. ಯಾಕೆಂದರೆ ಕೊರೊನಾ ಖಾಯಿಲೆಯ ಬಗ್ಗೆ ಭಯಬಿದ್ದು ಇಂದು ಎಷ್ಟೋ ಜನ ಆಸ್ಪತ್ರೆಗೆ ಹೋಗುವುದಕ್ಕೂ ಹಿಂಜರಿದಿದ್ದಾರೆ. ಅದೆಷ್ಟೋ ಮಂದಿ ನೆಗಡಿ , ತಲೆನೋವು , ಜ್ವರ ಬಂದರೂ ಆಸ್ಪತ್ರೆಗೆ ಹೋಗದೆ ಮನೆಯಲ್ಲೇ ಉಳಿದುಕೊಂಡಿರುತ್ತಾರೆ. ಅದರಲ್ಲಿ ಎಷ್ಟು ಮಂದಿಗೆ ಕೊರೊನಾ ಸೋಂಕು ತಗುಲಿದೆಯೋ ಇಲ್ಲವೋ ಯಾರಿಗೂ ಗೊತ್ತಿರುವುದಿಲ್ಲ. ಆದ್ದರಿಂದ ಸರಕಾರ ಲಾಕ್ ಡೌನ್ ಮಾಡಿರುವ ಈ ಸಮಯದಲ್ಲಿ ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತರು , ವೈದ್ಯರು ಮತ್ತು ನರ್ಸ್ ಗಳ ಮೂಲಕ ಮನೆ ಮನೆಗೆ ಭೇಟಿ ಮಾಡಿಸಿ ಪರೀಕ್ಷಿಸುವಂತೆ ಮಾಡಬೇಕು.  

ಅಲ್ಲದೆ ದೈನಂದಿನ ಆಹಾರ ಪದಾರ್ಥಗಳನ್ನು ಪೂರೈಸುವುದಕ್ಕಾಗಿ ಬೆಳಿಗ್ಗೆ 7 ರಿಂದ 12 ರ ತನಕ ದಿನಸಿ ಅಂಗಡಿಗಳು ತೆರೆದಿಡುವುದು ಕೂಡ ಕೊರೋನಾ ತಡೆಗಟ್ಟುವಲ್ಲಿ ತೊಡಕಾಗುತ್ತಿದೆ. ಆದ್ದರಿಂದ ಸರಕಾರವೇ ಆಯಾ ಪ್ರದೇಶಗಳಲ್ಲಿ ಒಂದೆರಡು ದಿನಸಿ ಅಂಗಡಿಗಳನ್ನು ಗೊತ್ತು ಪಡಿಸಿ ಅವರ ಮೂಲಕ ಪ್ರತಿಯೊಬ್ಬರ ಮನೆಬಾಗಿಲಿಗೆ ಆಹಾರ ಸಾಮಾಗ್ರಿಗಳನ್ನು ಪೂರೈಸುವುದರ ಬಗ್ಗೆ ತುರ್ತು ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಕೊರೋನಾ ಸೋಂಕಿತರು ಅವರಿಗೆ ಗೊತ್ತಿಲ್ಲದೇ ಬೇರೆಯವರಿಗೂ ಪಸರಿಸುವ ಸಾಧ್ಯತೆ ಇದೆ. ಈ ಮೇಲಿನ ಎಲ್ಲಾ ಕ್ರಮಗಳನ್ನು ಕೈಗೊಂಡರೆ ಮಾತ್ರ ಪ್ರಧಾನಿಯವರ ಲಾಕ್ ಡೌನ್ ನಿರ್ದಾರ ಕೊರೋನಾ ನಿರ್ಮೂಲನೆಗೊಳಿಸುವ ಒಂದು ಪರಿಣಾಮಕಾರಿ ಕ್ರಾಂತಿಕಾರಿ ಹೆಜ್ಜೆಯಾಗಿ ಪರಿವರ್ತಿಸಬಹುದು. ಇಲ್ಲಂದ್ರೆ ವರ್ಷಪೂರ್ತಿ ಲಾಕ್ ಡೌನ್ ಮಾಡಿದರೂ ಯಾವುದೇ ಉಪಯೋಗವಾಗದು ಎಂಬುದು ನನ್ನ ಅನಿಸಿಕೆ.

  • ಇಕ್ಬಾಲ್
  • ಭಾರತೀಯ ಮಾನವ ಹಕ್ಕು ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು , ದ.ಕ. ಜಿಲ್ಲೆ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts