ಜಿಲ್ಲಾ ಸುದ್ದಿ

ವಿದೇಶಿ ಕರಾವಳಿ ಕನ್ನಡಿಗರ ರಕ್ಷಣೆಗೆ ಕ್ರಮ: ಸಚಿವ ಕೋಟ

ಕೋವಿಡ್ 19 ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಅತಂತ್ರರಾಗಿರುವ ಕರಾವಳಿ ಸೇರಿದಂತೆ ಕನ್ನಡಿಗರ ರಕ್ಷಣೆಗೆ ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಾಹೀರಾತು

ಅವರು ಬುಧವಾರ ತಮ್ಮ ಕಚೇರಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಮುಂಬೈ ಸೇರಿದಂತೆ ಹೊರರಾಜ್ಯ ಹಾಗೂ ವಿದೇಶಗಳಲ್ಲಿ ಕರೋನಾ ಲಾಕ್‍ಡೌನ್‍ನಿಂದ ಕನ್ನಡಿಗರು ಸಂಕಷ್ಟಕ್ಕೀಡಾಗಿರುವ ಮಾಹಿತಿ ಇದೆ. ಅವರಿಗೆ ಅಗತ್ಯ ಸೌಲಭ್ಯ, ರಕ್ಷಣೆ ಸೇರಿದಂತೆ ಅವರ ಕ್ಷೇಮ ವಿಚಾರಿಸಲು ಮತ್ತು ಅಗತ್ಯ ನೆರವು ನೀಡಲು ರಾಜ್ಯ ಮಟ್ಟದ ವಾರ್ ರೂಂನಲ್ಲಿ ಪ್ರತ್ಯೇಕ ಹೆಲ್ಪ್ ಲೈನ್ ಸ್ಥಾಪಿಸಲು ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1848 ವಾರ್ಡ್‍ಗಳಲ್ಲಿ ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ, ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಗೃಹರಕ್ಷಕರು ಹಾಗೂ ಅಗತ್ಯಬಿದ್ದರೆ ಶಿಕ್ಷಣ ಇಲಾಖೆ ಸಿಬ್ಬಂದಿಗಳನ್ನು ಇವರೊಂದಿಗೆ ಕಾರ್ಯನಿಯೋಜಿಸಲಾಗುವುದು ಎಂದರು.

ಟ್ವಾಳ ಪೇಟೆಯಲ್ಲಿ ಇತ್ತೀಚೆಗೆ 50 ವರ್ಷದ ಮಹಿಳೆಯೊಬ್ಬರು ಕೋವಿಡ್ ಸೋಂಕಿತರಾಗಿ ನಿಧನಹೊಂದಿದ ಹಿನ್ನೆಲೆಯಲ್ಲಿ ಬಂಟ್ವಾಳ ಪೇಟೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಮೃತರ ಮನೆಯ 1 ಕಿ.ಮೀ. ವ್ಯಾಪ್ತಿಯಲ್ಲಿ 603 ಮನೆಗಳು ಹಾಗೂ 5 ಕಿ.ಮೀ. ವ್ಯಾಪಿಯಲ್ಲಿ 22106 ಕುಟುಂಬಗಳಿವೆ. ಆಶಾ ಕಾರ್ಯಕರ್ತೆಯರು ಪ್ರತೀ ಮನೆಮನೆಗೆ ತೆರಳಿ ಪ್ರತೀ ವ್ಯಕ್ತಿಯ ತಪಾಸಣೆ ಕೈಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು. ಬಂಟ್ವಾಳ ಘಟನೆಯಿಂದಾಗಿ ಜಿಲ್ಲಾಡಳಿತವು ಮತ್ತಷ್ಟು ಕಠಿಣ ಕ್ರಮ ಜಾರಿಗೆ ತರಲಿದೆ ಎಂದರು.

ಖಾಸಗೀ ಆಸ್ಪತ್ರೆಗಳಿಗೆ ಬರುವ ಶಂಕಿತ ಕರೋನಾ ಪ್ರಕರಣಗಳಿಗೆ ವಿಳಂಭ ಮಾಡದೇ, ತಕ್ಷಣವೇ ಅನಾರೋಗ್ಯ ಪೀಡಿತರನ್ನು ಕೋವಿಡ್ ಆಸ್ಪತ್ರೆಗೆ ಶಿಫಾರಸು ಮಾಡಲು ಆದೇಶಿಸಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಂತ ಗರ್ಭಿಣಿಯರು, ವೃದ್ಧರು, ಟಿ.ಬಿ. ಎಚ್.ಐ.ವಿ. ಪೀಡಿತರು, ಅಸ್ತಮಾ ರೋಗಿಗಳು ಸೇರಿದಂತೆ ವಿಶೇಷ ರೋಗಿಗಳತ್ತ ಗಮನಹರಿಸಿ, ಕಾಲಕಾಲಕ್ಕೆ ಅವರಿಗೆ ಸೂಕ್ತ ವೈದ್ಯಕೀಯ ತಪಾಸಣೆ ಸೇರಿದಂತೆ ಆರೋಗ್ಯ ನೆರವು ಒದಗಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ವೆನ್‍ಲಾಕ್ ಕೋವಿಡ್ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಲು 10 ವೈದ್ಯರು, 21 ನರ್ಸ್‍ಗಳು, 5 ಪ್ರಯೋಗಶಾಲಾ ತಂತ್ರಜ್ಞರು, ಡಿ ಗ್ರೂಪ್ ಸಿಬ್ಬಂದಿಗಳನ್ನು ನೇಮಕಾತಿ ಮಾಡಲು ಸರಕಾರ ಅನುಮತಿ ನೀಡಿದೆ ಎಂದು ಅವರು ಹೇಳಿದರು.

ದ.ಕ. ಜಿಲ್ಲೆಯಲ್ಲಿ 2.71 ಲಕ್ಷ ಬಿಪಿಎಲ್ ಕಾರ್ಡುದಾರರಿದ್ದು, ಈ ಪೈಕಿ 2.60 ಲಕ್ಷ ಕಾರ್ಡುಗಳಿಗೆ ಪ್ರತೀ ವ್ಯಕ್ತಿಗೆ ತಲಾ 10 ಕೆ.ಜಿ.ಯಂತೆ ಅಕ್ಕಿ ವಿತರಿಸಲಾಗಿದೆ. ಎಪಿಎಲ್ ಕಾರ್ಡುಗಳಿಗೆ ಆಸಕ್ತಿ ವ್ಯಕ್ತಪಡಿಸಿದವರಿಗೆ ತಲಾ 10 ಕೆ.ಜಿ. ಅಕ್ಕಿ ವಿತರಿಸಲಾಗಿದೆ. ಮೇ-ಜೂನ್ ತಿಂಗಳಲ್ಲಿ ಎಲ್ಲಾ ಎಪಿಎಲ್ ಕಾರ್ಡುದಾರರಿಗೆ ಅಗತ್ಯವೆನಿಸಿದರೆ ಕೆ.ಜಿ.ಗೆ ರೂ. 15ರ ದರದಲ್ಲಿ 10 ಕೆ.ಜಿ.ಯಂತೆ ಅಕ್ಕಿ ವಿತರಿಸಲಾಗುವುದು. ಮುಂದಿನ ತಿಂಗಳಿಂದ ಪ್ರತೀ ಬಿಪಿಎಲ್ ಕಾರ್ಡಿಗೆ 4 ಕೆ.ಜಿ. ಗೋಧಿ, 1 ಕೆ.ಜಿ. ತೊಗರಿ ಬೇಳೆ, ಕುಚ್ಚಲಕ್ಕಿ ಸೇರಿದಂತೆ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ ವಿತರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 minutes ago