ಪ್ರಮುಖ ಸುದ್ದಿಗಳು

ಮತ್ತೋರ್ವ ಮಹಿಳೆ ಕೊರೊನಾಕ್ಕೆ ಬಲಿ

ಬಂಟ್ವಾಳಕ್ಕೆ ಇದೊಂದು ಆಘಾತಕಾರಿ ಸುದ್ದಿ. ಕೋವಿಡ್ ಗೆ ಬಂಟ್ವಾಳದ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ಈಗಾಗಲೇ ಭಾನುವಾರ ಬಂಟ್ವಾಳ ಪೇಟೆ ನಿವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಬಂಟ್ವಾಳದ 75 ವರ್ಷದ ಮಹಿಳೆ ಅಧಿಕ ರಕ್ತದೊತ್ತಡ, ಹಾಗೂ ಸ್ಟ್ರೋಕ್ ಹಿನ್ನೆಲೆಯಲ್ಲಿ ಮಾರ್ಚ್ 18ರಂದು ಮಂಗಳೂರಿನ ಫಸ್ಟ್ ನ್ಯೂರೊ ಸ್ಪೆಶಾಲಿಟಿಗೆ ದಾಖಲಾಗಿದ್ದು, ಕಳೆದ ಎರಡು ದಿನಗಳಿಂದ ಜ್ವರ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರಣ, (ಏ.22ರಂದು) ವೆನ್ಲಾಕ್ ಗೆ ದಾಖಲಾಗಿದ್ದರು. ಈ ಸಂದರ್ಭ ಇವರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿಯಿಂದ ಕೋವಿಡ್ 19 ಸೋಂಕು ಕಂಡುಬಂತು. ಏ.23ರಂದು ಚಿಕಿತ್ಸೆಗೆ ಸ್ಪಂದಿಸದೆ ಅವರು ಮರಣ ಹೊಂದಿರುತ್ತಾರೆ ಎಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಫಸ್ಟ್ ನ್ಯೂರೋ ಸ್ಪೆಶಾಲಿಟಿ ಆಸ್ಪತ್ರೆ ಪಡೀಲ್ ನ 100 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದ್ದು, ಈ ಪ್ರದೇಶದಿಂದ 5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ ಆದೇಶ ಹೊರಡಿಸಲಾಗಿದೆ. ಫಸ್ಟ್ ನ್ಯೂರೊ ಸ್ಪೆಶಾಲಿಟಿ ಆಸ್ಪತ್ರೆಯನ್ನು ಸುಪರ್ ವೈಸ್ಡ್ ಐಸೋಲೇಶನ್ ಸೆಂಟರ್ ಎಂದು ಘೋಷಿಸಲಾಗಿದ್ದು, ಡಾ. ರಾಜೇಶ್ ಶೆಟ್ಟಿ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಬಂಟ್ವಾಳ ಕಸಬಾ ನಿವಾಸಿ ಆರೋಗ್ಯ ಯಥಾ ಸ್ಥಿತಿಯಲ್ಲಿರುತ್ತದೆ. ಇವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಸಿದ್ದಾರೆ.

ಇವತ್ತು ಉಸಿರಾಟದ ತೊಂದರೆ ಇರುವ 14 ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ 8 ವೆನ್ಲಾಕ್ ಗೆ ಶಿಫಾರಸು ಮಾಡಲಾಗಿದೆ. 39 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 376 ಮಂದಿಯ ಪರೀಕ್ಷಾ ಫಲಿತಾಂಶ ಬರಲು ಬಾಕಿ ಇದೆ. 214 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬಂದಿದ್ದು, ಅವುಗಳ ಪೈಕಿ 1 ಪಾಸಿಟಿವ್ ಬಂದಿತ್ತು. 95 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿದೆ. ಮಂಗಳೂರಿನ ಎನ್.ಐ.ಟಿ.ಕೆಯಲ್ಲಿ 50 ಮಂದಿ ಕ್ವಾರಂಟೈನ್ ನಲ್ಲಿದ್ದರೆ, 10 ಮಂದಿ ಇಎಸ್ ಐನಲ್ಲಿದ್ದಾರೆ. ಒಟ್ಟು ವಿವರ  ಹೀಗಿದೆ. 17 ಪಾಸಿಟಿವ್, ಇವುಗಳ ಪೈಕಿ 2 ಸಾವು, 12 ಗುಣಮುಖ, 3 ಚಿಕಿತ್ಸೆಯಲ್ಲಿ.

www.bantwalnews.com Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago