ಊಹಾಪೋಹ ಮಾಡುವುದರ ಬದಲು ಪರಸ್ಪರ ಸಹಾಯ ಮಾಡುವುದೇ ಮೊದಲ ಆದ್ಯತೆ ಆಗಿರಲಿ

  • ಸುನೀಲ್, ಅಪೂರ್ವ ಜ್ಯುವೆಲರ್ಸ್ ಬಿ.ಸಿ.ರೋಡ್.

ವಿಶ್ವದಾದ್ಯಂತ ಸದ್ದು ಮಾಡಿರುವ ಕೊರೊನಾ ನಮ್ಮೂರಲ್ಲೇ ತೊಂದರೆ ಕೊಡುತ್ತಿದೆ. ನಾವೆಲ್ಲರೂ ಜಾಗರೂಕರಾಗಿರೋಣ. ಸದ್ಯಕ್ಕೆ ಕೊರೊನಾ ಹರಡದೆ ಇರುವಂತೆ ಜಾಗರೂಕತೆ ವಹಿಸುವುದೊಂದೇ ನಮಗಿರುವ ಏಕೈಕ ಆಯ್ಕೆ.

ಜಾಹೀರಾತು

ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೋಲೀಸ್ ಇಲಾಖೆ,ಆಶಾ ಕಾರ್ಯಕರ್ತೆಯರು ಇವರೆಲ್ಲಾ ನಮ್ಮ ರಕ್ಷಣೆಗಾಗಿ ಅವರ ಜೀವವನ್ನೇ ಮುಡಿಪಾಗಿಟ್ಟು ಶ್ರಮಿಸುತ್ತಿದ್ದಾರೆ. ಅವರ ಕರ್ತವ್ಯ ಕ್ಕೆ ಅಡ್ಡಿ ಪಡಿಸದೆ ಅವರೊಂದಿಗೆ ಸಹಕರಿಸಿ ಅವರು ಕೊಡುವ ಸೂಚನೆಗಳನ್ನು ಪ್ರಜ್ಞಾವಂತರಾಗಿ ಪಾಲಿಸುವುದು ಉತ್ತಮ.

ದಿಗಿಲಾಗುವ ಸುಳ್ಳು ಸುದ್ದಿ, ರಾಜಕೀಯ ಪ್ರೇರಿತ ಊಹಾಪೋಹಗಳಿಗೆ ಆಸ್ಪದ ಕೊಡದೆ ಪರಸ್ಪರ ಸಹಾಯ ಮಾಡಿಕೊಂಡು ಈ ಮಹಾಮಾರಿ ರೋಗದ ವಿರುದ್ಧ ಸೌಹಾರ್ದತೆಯಿಂದ ಹೋರಾಡುವುದು ನಮ್ಮ ಮೊದಲ ಆದ್ಯತೆ ಆಗಬೇಕು.

ಲಾಕ್ ಡೌನ್ ಸಮಯದಲ್ಲಿ ಇರುವ ಸಮಸ್ಯೆಗಳನ್ನು ಎದುರಿಸುವುದು ಒಂದು ಸವಾಲು ಆದರೆ ಅದು ಮುಗಿದ ಬಳಿಕ ಮುಂಬರುವ ಸವಾಲುಗಳನ್ನು, ಕಷ್ಟಗಳನ್ನು ಎದುರಿಸುವುದು ಅದಕ್ಕಿಂತ ದೊಡ್ಡ ಸವಾಲು ಆ ಬಗ್ಗೆ ಮಾನಸಿಕವಾಗಿ ಸಿದ್ಧರಾಗುವುದು ತುಂಬಾ ಅನಿವಾರ್ಯ.

ಜಾಹೀರಾತು

ಸದ್ಯಕ್ಕೆ ಸರಕಾರ ಇದಕ್ಕಿಂತ ಉತ್ತಮವಾಗಿ ಇನ್ನೇನನ್ನೂ ಮಾಡುವಂತಿಲ್ಲ ಎಂಬುದು ನನ್ನ ಅನಿಸಿಕೆ ಆದರೆ ಮುಂಬರುವ ದಿನಗಳಲ್ಲಿ ಆರ್ಥಿಕ ವ್ಯವಸ್ಥೆಯನ್ನು ಪುನರ್ನಿರ್ಮಾಣ ಮಾಡುವಲ್ಲಿ  ಕಾನೂನುಗಳನ್ನು ಆದಷ್ಟು ಜನಸ್ನೇಹಿಯಾಗಿ ಪರಿವರ್ತಿಸುವುದು ಉತ್ತಮ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಊಹಾಪೋಹ ಮಾಡುವುದರ ಬದಲು ಪರಸ್ಪರ ಸಹಾಯ ಮಾಡುವುದೇ ಮೊದಲ ಆದ್ಯತೆ ಆಗಿರಲಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*