ಕೋವಿಡ್-19 ಹತೋಟಿ ವೈದ್ಯರ, ಪೋಲಿಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕರ ನಡವಳಿಕೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹಮ್ಮದ್ ಬಂಧಿಸಿ, ಶಾಸಕತ್ವ ಅನರ್ಹಗೊಳಿಸಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಂಟ್ವಾಳದ ತಾಪಂ ಸದಸ್ಯ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.
ಜಾಹೀರಾತು
ಬೆಂಗಳೂರು ನಗರದ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈಂನ್ ಗಾಗಿ ಶೋಧನೆ ಮಾಡಲು ಹೋದ ಆರೋಗ್ಯ ಇಲಾಖೆಯ ವೈದ್ಯರು, ಆಶಾ ಕಾರ್ಯಕರ್ತೆಯರು ,ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮುಖ್ಯವಾಗಿ ನಮ್ಮೆಲ್ಲರ ರಕ್ಸಣೆಯ ಪೋಲಿಸ್ ಅಧಿಕಾರಿಗಳು, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ದಾಂಧಲೇ ಮಾಡಿರುವ ಹಿನ್ನೆಲೆಯಲ್ಲಿ ಅಲ್ಲಿನ ಶಾಸಕ ಜಮೀರ್ ಅಹಮದ್ ನಡವಳಿಕೆ ಸರಿಯಲ್ಲ, ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ, ತನಿಖೆ ನಡೆಸಬೇಕು ಎಂದು ಒತ್ತಾಯಪಡಿಸಿದ್ದಾರೆ. ಮನವಿಯನ್ನು ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರಿಗೂ ಸಲ್ಲಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶಾಸಕ ಜಮೀರ್ ಅಹಮ್ಮದ್ ಬಂಧಿಸಿ, ಶಾಸಕತ್ವ ಅನರ್ಹಗೊಳಿಸಲು ತಾಪಂ ಸದಸ್ಯ ಮನವಿ"
Be the first to comment on "ಶಾಸಕ ಜಮೀರ್ ಅಹಮ್ಮದ್ ಬಂಧಿಸಿ, ಶಾಸಕತ್ವ ಅನರ್ಹಗೊಳಿಸಲು ತಾಪಂ ಸದಸ್ಯ ಮನವಿ"