ಬಂಟ್ವಾಳ

ಶಾಸಕ ಜಮೀರ್ ಅಹಮ್ಮದ್ ಬಂಧಿಸಿ, ಶಾಸಕತ್ವ ಅನರ್ಹಗೊಳಿಸಲು ತಾಪಂ ಸದಸ್ಯ ಮನವಿ

ಕೋವಿಡ್-19 ಹತೋಟಿ ವೈದ್ಯರ, ಪೋಲಿಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕರ ನಡವಳಿಕೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹಮ್ಮದ್ ಬಂಧಿಸಿ, ಶಾಸಕತ್ವ ಅನರ್ಹಗೊಳಿಸಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಂಟ್ವಾಳದ ತಾಪಂ ಸದಸ್ಯ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.

ಜಾಹೀರಾತು

ಬೆಂಗಳೂರು ನಗರದ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈಂನ್ ಗಾಗಿ ಶೋಧನೆ ಮಾಡಲು ಹೋದ ಆರೋಗ್ಯ ಇಲಾಖೆಯ ವೈದ್ಯರು, ಆಶಾ ಕಾರ್ಯಕರ್ತೆಯರು ,ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮುಖ್ಯವಾಗಿ ನಮ್ಮೆಲ್ಲರ ರಕ್ಸಣೆಯ ಪೋಲಿಸ್ ಅಧಿಕಾರಿಗಳು, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ದಾಂಧಲೇ ಮಾಡಿರುವ ಹಿನ್ನೆಲೆಯಲ್ಲಿ ಅಲ್ಲಿನ ಶಾಸಕ ಜಮೀರ್ ಅಹಮದ್ ನಡವಳಿಕೆ ಸರಿಯಲ್ಲ, ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ, ತನಿಖೆ ನಡೆಸಬೇಕು ಎಂದು ಒತ್ತಾಯಪಡಿಸಿದ್ದಾರೆ. ಮನವಿಯನ್ನು ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರಿಗೂ ಸಲ್ಲಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.