ಗುರುವಾರ ಕೊರೋನಾ ಸೋಂಕಿನಿಂದ ಮೃತಪಟ್ಟ ಹಿರಿಯ ಮಹಿಳೆಯ ಮೃತದೇಹದ ಅಂತ್ಯಕ್ರಿಯೆ ನಡೆಸುವಲ್ಲಿ ಗೊಂದಲ ಸೃಷ್ಠಿಸಿದ್ದು ವಿಷಾದನೀಯವಾಗಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ.
ಜಾಹೀರಾತು
ಅಂತ್ಯಕ್ರಿಯೆ ನಡೆಸಲು ತಡೆಯೊಡ್ಡಿ ಶವವನ್ನು ಅಲ್ಲಿಂದಿಲ್ಲಿಗೆ ಅಲೆದಾಡಿಸುವಂತೆ ಮಾಡುವ ಕೃತ್ಯವು ಅಮಾನವೀಯವಾಗಿದೆ. ಮೃತದೇಹವನ್ನು ಗೌರವಯುತವಾಗಿ ಶವ ಸಂಸ್ಕಾರ ನಡೆಸುವ ಸಂಸ್ಕೃತಿಗೆ ವಿರುದ್ಧವಾಗಿ ಮೃತದೇಹಕ್ಕೆ ಅಗೌರವ ತೋರುವುದು ಯಾರೇ ವ್ಯಕ್ತಿಗೂ ಶೋಭೆಯಲ್ಲ. ಮುಂದಿನ ದಿನಗಳಲ್ಲಿ ಜಿಲ್ಲಾ ಆಡಳಿತವು ಕೋರೊನಾ ವೈರಸ್ ನಿಂದ ಮರಣ ಹೊಂದಿದ ವರನ್ನು ಯಾವ ಜಾಗದಲ್ಲಿ ಮತ್ತು ಯಾವ ರೀತಿಯಾಗಿ ಅಂತ್ಯಕ್ರಿಯೆ ನೆರವೇರಿಸಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿ ತೀರ್ಮಾನಿಸಬೇಕು. ಯಾಕೆಂದರೆ ಬಂಟ್ವಾಳದ ನಿವಾಸಿಯಾಗಿರುವ ಮಹಿಳೆಗೆ ಬಂಟ್ವಾಳದಲ್ಲೇ ಇರುವ ಸ್ಮಶಾನದಲ್ಲೂ ಅಂತ್ಯಕ್ರಿಯೆಗೆ ಅವಕಾಶ ಸಿಗದಿರುವುದು ಅಘಾತಕಾರಿ ವಿಚಾರವೇ ಆಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಇರುವ ಜನಪ್ರತಿನಿಧಿಗಳು ಸಮಿತಿಗೆ ಸೀಮಿತವಾಗದೆ ಜನರ ಕಷ್ಟಗಳಿಗೆ ಸ್ಪಂದಿಸುವ ಮೂಲಕ, ಮೃತದೇಹದ ಗೌರವಯುತ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡುವ ಮೂಲಕ ಮಾನವೀಯತೆಯನ್ನು ಮೆರೆಯಬೇಕಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶವಸಂಸ್ಕಾರದ ಗೊಂದಲ ಸೃಷ್ಟಿ ಖೇದಕರ: ಬೇಬಿ ಕುಂದರ್"
Be the first to comment on "ಶವಸಂಸ್ಕಾರದ ಗೊಂದಲ ಸೃಷ್ಟಿ ಖೇದಕರ: ಬೇಬಿ ಕುಂದರ್"