ಶವದಹನ ನಡೆಸುವುದು ಪುಣ್ಯಕಾರ್ಯ, ನನ್ನ ಜಾಗದಲ್ಲೇ ಮಾಡಿ ಎಂದು ಹೇಳಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಶವದಹನಕ್ಕೆ ಎಲ್ಲಿಯೂ ಜಾಗ ಸಿಗದೆ ಜಿಲ್ಲಾಡಳಿತ ಪರದಾಡುತ್ತಿದ್ದಾಗ, ಶವಸಂಸ್ಕಾರ ಮಾಡುವುದು ಪುಣ್ಯಕಾರ್ಯ, ತನ್ನ ಜಾಗದಲ್ಲೇ ಮಾಡಬಹುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದು ಈಗ ಸುದ್ದಿಯಾಗುತ್ತಿದೆ.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಎರಡನೇ ಬಲಿಯಾಗಿದೆ. ಎಪ್ರಿಲ್‌ 19 ರಂದು ಮೃತಪಟ್ಟ ಮಹಿಳೆಯ ಸಂಬಂಧಿ ಮಹಿಳೆಯೋರ್ವರು ನಿನ್ನೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ ಭಾನುವಾರ ಮೃತ ಮಹಿಳೆಯ ಶವಸಂಸ್ಕಾರವನ್ನು ಮಂಗಳೂರಿನಲ್ಲಿ ನಡೆಸಿದಾಗ ಸ್ಥಳೀಯವಾಗಿ ಜನರು ಪ್ರತಿಭಟಿಸಿದ್ದು ನಿನ್ನೆ ಮೃತ ಪಟ್ಟ ಮಹಿಳೆಯ ಶವ ಸಂಸ್ಕಾರವು ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತು. ಮಂಗಳೂರಿನ ಎರಡು ಮೂರು ಕಡೆಗಳಲ್ಲಿ ಇದಕ್ಕೆ ವಿರೋಧ ವ್ಯಕ್ತವಾದಾಗ ಆಡಳಿತ ಬಂಟ್ವಾಳದಲ್ಲಿ ಈ ಕಾರ್ಯಕ್ಕೆ ಮುಂದಾದಾಗ ಅಲ್ಲಿಯೂ ವಿರೋಧ ಉಂಟಾದಾಗ ರಾತ್ರಿ ಸುಮಾರು 11 ಗಂಟೆಗೆ ಸ್ಥಳೀಯ ಶಾಸಕ ರಾಜೇಶ್ ನಾಯ್ಕ್ ಅವರನ್ನು ಸಂಪರ್ಕಿಸಿತು. ತಕ್ಷಣವೇ ಮಾನವೀಯತೆ ಮೆರೆದ ಶಾಸಕರು ತನ್ನ ಪತ್ನಿ ಪುತ್ರರಲ್ಲಿ ಮಾತುಕತೆ ನಡೆಸಿ ಸಂಸದ ನಳಿನ್ ಕುಮಾರ್ ಕಟೀಲ್ ರವರಿಗೆ ತಿಳಿಸಿದ ಬಳಿಕ ಶವಸಂಸ್ಕಾರಕ್ಕೆ ಎಲ್ಲಿಯೂ ಅವಕಾಶ ಸಿಗದಲ್ಲಿ ತನ್ನ ಸ್ವಂತ ಸ್ಥಳದಲ್ಲಿ ನಾನು ಅವಕಾಶ ನೀಡತ್ತೇನೆ ಇಲ್ಲಿ ತಂದು ಅಂತ್ಯ ಸಂಸ್ಕಾರ ಮಾಡಬಹುದು. ಯಾಕೆಂದರೆ ಮೃತಮಹಿಳೆ ನನ್ನ ಕ್ಷೇತ್ರ ದವರು. ಶವಸಂಸ್ಕಾರಕ್ಕೂ ಅವಕಾಶ ನೀಡದ ದಯನೀಯ ಸ್ಥಿತಿ ನನ್ನ ಕ್ಷೇತ್ರದ ಮಹಿಳೆಗೆ ಬರಬಾರದು ಎಂದರು. ಆದರೆ  ಕೊನೆಗೆ ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಸಾರ್ವಜನಿಕ ಹಿಂದು ರುದ್ರಭೂಮಿಯಲ್ಲಿ ಜಿಲ್ಲಾಡಳಿತ, ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಹಕಾರದೊಂದಿಗೆ ಶವಸಂಸ್ಕಾರ ನಡೆಸಲಾಯಿತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಶವದಹನ ನಡೆಸುವುದು ಪುಣ್ಯಕಾರ್ಯ, ನನ್ನ ಜಾಗದಲ್ಲೇ ಮಾಡಿ ಎಂದು ಹೇಳಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*