ಬಂಟ್ವಾಳ

ಬಂಟ್ವಾಳ ತಾಲೂಕಿನಿಂದ ತವರಿಗೆ ಹೊರಟ ವಲಸೆ ಕಾರ್ಮಿಕರು

ಜಾಹೀರಾತು

ಬಾಗಲಕೋಟೆಗೆ ತೆರಳುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದಲ್ಲಿದ್ದ 66 ವಲಸೆ ಕಾರ್ಮಿಕರಿಗೆ ನೀರಪಾದೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ. ಚೈತ್ರಾ ಆರೋಗ್ಯ ತಪಾಸಣೆ ನಡೆಸಿಕೊಟ್ಟರು. ಈ ಸಂದರ್ಭ ಪಂಚಾಯಿತಿ ವತಿಯಿಂದ 300 ಗ್ಲೌಸ್, ಸ್ಯಾನಿಟೈಸರ್, ಊಟದ ವ್ಯವಸ್ಥೆ ಮಾಡಿಕೊಡಲಾಯಿತು.

ಬಂಟ್ವಾಳ ತಾಲೂಕಿನ ನಾನಾ ಕಡೆಗಳಲ್ಲಿ ಗ್ರಾಮ ಪಂಚಾಯಿತಿ ಸುಪರ್ದಿಯಲ್ಲಿ 624 ಕಾರ್ಮಿಕರು ಅವರವರ ಊರುಗಳಿಗೆ ತೆರಳುವ ಕಾರ್ಯ ಶನಿವಾರ ರಾತ್ರಿ ನಡೆಯಿತು.ರಾಜ್ಯ ಸರಕಾರದ ಆದೇಶ ಮೇರೆಗೆ ದ.ಕ. ಜಿಲ್ಲಾಡಳಿತದಿಂದ ಇತರ ಜಿಲ್ಲೆಗಳ ವಲಸೆ ಕಾರ್ಮಿಕರನ್ನು ಅವರವರ ಪ್ರದೇಶಗಳಿಗೆ ಸ್ಥಳಾಂತರ ನಡೆಯುತ್ತಿದೆ.

ಪ್ರತಿ ತಾಲೂಕುಗಳಿಂದಲೂ ಕಾರ್ಮಿಕರನ್ನು ಅವರ ತವರು ಪ್ರದೇಶಗಳಿಗೆ ಕಳುಹಿಸಲಾಗುತ್ತಿದೆ. ಅದರಂತೆ ಬಂಟ್ವಾಳದಲ್ಲೂ ಶನಿವಾರ ತಾಲೂಕು ಪಂಚಾಯಿತಿ ಮತ್ತು ತಾಲೂಕಾಡಳಿತವು ಪ್ರತಿ ಗ್ರಾಪಂಗಳಲ್ಲಿರುವ ವಲಸೆ ಕಾರ್ಮಿಕರ ಪಟ್ಟಿಯನ್ನು ಮಾಡಿ, ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಆರೋಗ್ಯ ತಪಾಸಣೆಯನ್ನು ಕೈಗೊಂಡು, ಅವರಿಗೆ ಪೂರಕವಾಗಿ ಬೇಕಾದ ವ್ಯವಸ್ಥೆಗಳನ್ನು ಸರ್ಕಾರದ ವತಿಯಿಂದ ಕಲ್ಪಿಸಲಾಯಿತು. ಬಿಜಾಪುರ, ಬಾಗಲಕೋಟೆ, ರಾಯಚೂರು, ಗದಗ ಮೊದಲಾದ ಪ್ರದೇಶಗಳಿಗೆ ತೆರಳುವ ವಲಸೆಕಾರ್ಮಿಕರಿಗೆ ಕೆಎಸ್ಸಾರ್ಟಿಸಿ ಬಿ.ಸಿ.ರೋಡ್ ಬಸ್ ನಿಲ್ದಾಣದಿಂದ ಸುಮಾರು 28 ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪರಿಶೀಲನೆ ನಡೆಸಿದರು.

ಗದಗಕ್ಕೆ 125, ಬಾಗಲಕೋಟೆಗೆ 252, ಕೊಪ್ಪಳಕ್ಕೆ 88, ಬಿಜಾಪುರಕ್ಕೆ 90 ಮತ್ತು ರಾಯಚೂರಿಗೆ 69 ಮಂದಿಯನ್ನು ಕಳುಹಿಸಲಾಗಿದೆ ಎಂದು ತಾಪಂ ಇಒ ರಾಜಣ್ಣ ತಿಳಿಸಿದ್ದಾರೆ.

ಈ ಸಂದರ್ಭ ಸಹಾಯಕ ಕಮೀಷನರ್ ಮದನ್ ಮೋಹನ್, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಕಂದಾಯ ಇಲಾಖೆಯ ಆರ್. ಐ.ಗಳಾದ ರಾಮ ಕಾಟಿಪಳ್ಳ, ದಿವಾಕರ್, ನವೀನ್, ಎಸ್.ಐ.ಗಳಾದ ಪ್ರಸನ್ನ, ಅವಿನಾಶ್, ಕೆಎಸ್ಸಾರ್ಟಿಸಿ ಅಧಿಕಾರಿಗಳ ಸಹಿತ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದು, ಕಾರ್ಮಿಕರಿಗೆ ಸರ್ಕಾರದ ನಿರ್ದೇಶನದ ಪ್ರಕಾರ ಕಳುಹಿಸುವ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

7 hours ago