ಬಂಟ್ವಾಳ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ 100ಕ್ಕೂ ಅಧಿಕ ಗೃಹರಕ್ಷಕ ದಳದ ಸಿಬ್ಬಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ರೇಶನ್ ಕಿಟ್ ವಿತರಿಸಲಾಯಿತು.
ಈ ವೇಳೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಪ್ರಮುಖರಾದ ಮಹಮ್ಮದ್ ನಂದಾವರ, ಡೆಂಝಿಲ್ ನೊರೊನ್ಹಾ, ಮೆಲ್ವಿನ್, ವೆಂಕಪ್ಪ ಪೂಜಾರಿ ಇದ್ದರು.