ಬಂಟ್ವಾಳ

ಚುನಾಯಿತ ಜನಪ್ರತಿನಿಧಿಗಳು ಶವಸಂಸ್ಕಾರದ ಬಗ್ಗೆ ನಡೆಸಿಕೊಂಡ ರೀತಿ ಸರಿ ಇಲ್ಲ: ರಮಾನಾಥ ರೈ

ಪರಿಜ್ಞಾನ ಇದ್ದ ಚುನಾಯಿತ ಪ್ರತಿನಿಧಿಗಳು ಶವ ಸಂಸ್ಕಾರದ ಬಗ್ಗೆ ನಡೆಸಿಕೊಂಡ ರೀತಿ ಸರಿಯಲ್ಲ. ವಿಶೇಷ ಸಂದರ್ಭಗಳಲ್ಲಿ ಯಾವ ಆಸ್ಪತ್ರೆಯಲ್ಲಿ ಸಾವು ಸಂಭವಿಸುತ್ತದೆಯೋ ಆ ಆಸ್ಪತ್ರೆಯ ಹತ್ತಿರದಲ್ಲಿರುವ ಚಿತಾಗಾರದಲ್ಲೇ ಶವ ಸಂಸ್ಕಾರ ನಡೆಸಬೇಕು. ಅದರಲ್ಲೂ ವಿದ್ಯುತ್ ಚಿತಾಗಾರ ಇದ್ದರೆ ಅದಕ್ಕೆ ಆದ್ಯತೆ ನೀಡಬೇಕು. ಚುನಾಯಿತ ಪ್ರತಿನಿಧಿಗಳ ಪ್ರಭಾವಕ್ಕೆ ಮಣಿದು ಪಾರ್ಥಿವ ಶರೀರಕ್ಕೆ ಅವಮಾನ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಬಿ ರಮಾನಾಥ ರೈ ತೀವ್ರ ಖೇದ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

ವಿಶೇಷ ಸಂದರ್ಭಗಳಲ್ಲಾದರೂ ಪಾರ್ಥಿವ ಶರೀರದ ಸಂಸ್ಕಾರ ಎಲ್ಲೆಲ್ಲೋ ದಾರಿಯಲ್ಲಿ ಮಾಡಲಿಕ್ಕೆ ಬರುವುದಿಲ್ಲ. ಅಥವಾ ಯಾರೋ ಖಾಸಗಿ ಜಾಗ ನೀಡಿಯೂ ಮಾಡಲಿಕ್ಕಾಗುವುದಿಲ್ಲ. ಅದಕ್ಕೆ ಅದರದ್ದೇ ಆದ ರೀತಿ-ನಿಯಮ, ಕಾನೂನುಗಳಿರುತ್ತವೆ. ಈ ಎಲ್ಲಾ ನಿಯಮಗಳನ್ನು ಜಾರಿಗೆ ತರುವಂತದ್ದು ಜಿಲ್ಲಾಡಳಿತ. ಇದಕ್ಕೆ ಯಾರದೆ ಕಟ್ಟಪ್ಪಣೆ ಬೇಕಾಗಿಲ್ಲ. ಜಿಲ್ಲಾಡಳಿತಕ್ಕೆ ಕಾನೂನಿನ ತಿಳಿವಳಿಕೆ ಇರುತ್ತದೆ. ಅದಕ್ಕೆ ಯಾವುದೇ ವ್ಯಕ್ತಿಗಳು ಮಧ್ಯಪ್ರವೇಶ ಮಾಡುವ ಅಗತ್ಯವಿರುವುದಿಲ್ಲ. ಸಾಮಾನ್ಯ ಜನರಿಗೆ ಈ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಅಂದ ಮಾತ್ರಕ್ಕೆ ಜನಪ್ರತಿನಿಧಿಗಳೂ ಸಾಮಾನ್ಯ ಜ್ಞಾನ ಇಲ್ಲದಂತೆ ವರ್ತಿಸುವುದು ಸರಿಯಲ್ಲ. ಪಾರ್ಥಿವ ಶರೀರಕ್ಕೆ ಅದರದ್ದೇ ಆದ ಗೌರವ ಇರುತ್ತದೆ. ಅದನ್ನು ಗೌರವಿಸುವುದು ಮಾನವ ಲಕ್ಷಣ. ಅದು ಬಿಟ್ಟು ಎಲ್ಲವೂ ಗೊಂದಲಮಯ ಆದ ನಂತರ ಖಾಸಗಿ ಜಾಗ ಬೇಕಾದರೂ ನೀಡುತ್ತೇನೆ ಎನ್ನುವ ಮೂಲಕ ಗೊಂದಲಕ್ಕೆ ತೇಪೆ ಹಚ್ಚಿದರೆ ಮಣ್ಣುಪಾಲಾದ ಗೌರವ ಮರಳಿ ಬರುವುದಿಲ್ಲ ಎಂದು ರಮಾನಾಥ ರೈ ಪ್ರಕಟಣೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಚರ್ಚಿಸಲಾಗಿದೆ. ಆಗಿರುವ ಪ್ರಮಾದವನ್ನು ಜಿಲ್ಲಾಧಿಕಾರಿಗಳು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಅಚಾತುರ್ಯಗಳು ನಡೆಯಬಾರದು ಎಂಬ ಮನವಿಯನ್ನು ಡೀಸಿಗೆ ಮಾಡಲಾಗಿದೆ. ಈ ಬಗ್ಗೆ ಜಾಗರೂಕತೆ ವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು. ನಿಯೋಗದಲ್ಲಿ ಶಾಸಕರಾದ ಯು ಟಿ ಖಾದರ್, ಐವನ್ ಡಿ’ಸೊಜ, ಜೆ ಆರ್ ಲೋಬೋ, ಮೊಯಿದಿನ್ ಬಾವಾ, ಮಿಥುನ್ ರೈ ಮೊದಲಾದವರು ಜೊತೆಗಿದ್ದರು ಎಂದು ರೈ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts