ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ 2 ಪಾಸಿಟಿವ್, ದ.ಕ.ಜಿಲ್ಲೆಯಲ್ಲಿ ಒಟ್ಟು 21 ಕೇಸ್, 12 ಗುಣಮುಖ, 2 ಮೃತ, 7 ಮಂದಿಗೆ ಚಿಕಿತ್ಸೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ಅನುಸಾರ ಕೊರೊನಾ ಸಂಬಂಧಿಸಿ ಜಿಲ್ಲೆಯಲ್ಲಿ ಒಟ್ಟು 21 ಪ್ರಕರಣಗಳು ದಾಖಲಾಗಿವೆ. ಇಂದು ಮಂಗಳೂರಿನಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ.

ಜಾಹೀರಾತು

ವಿವರ ಹೀಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎರಡು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು 21 ಪ್ರಕರಣಗಳು ಕೋವಿಡ್ ಪಾಸಿಟಿವ್ ಪ್ರಕರಣಗಳು ಇದುವರೆಗೆ ವರದಿಯಾದಂತಾಗಿದೆ. ಇವರ ಪೈಕಿ ಇಬ್ಬರು ಮೃತಪಟ್ಟಿದ್ದು, 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಮಂದಿಯನ್ನು ಬಿಡುಗಡೆ ಮಾಡಲಾಗಿದೆ.

ಚಿಕಿತ್ಸೆ ಪಡೆಯುತ್ತಿರುವವರ ಪೈಕಿ ಬಂಟ್ವಾಳದ ಮೂವರು, ಉಪ್ಪಿನಂಗಡಿಯ ಇಬ್ಬರು ಮತ್ತು ಮಂಗಳೂರು ಶಕ್ತಿನಗರ ಪರಿಸರದ ಇಬ್ಬರು ಇದ್ದಾರೆ.  ಬಂಟ್ವಾಳ ತಾಲೂಕಿನಲ್ಲಿ 3 ಚಿಕಿತ್ಸೆ ಪಡೆಯುತ್ತಿದ್ದರೆ 2 ಗುಣಮುಖರಾಗಿದ್ದರು. 2 ಸಾವನ್ನಪ್ಪಿದ್ದಾರೆ.

ಸೋಮವಾರ ಮಂಗಳೂರಿನ ಇಬ್ಬರಿಗೆ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ.

ಮಂಗಳೂರು ಮಹಾನಗರಪಾಲಿಕೆಯ ಕುಲಶೇಖರ ವ್ಯಾಪ್ತಿಯ ಶಕ್ತಿನಗರ ನಿವಾಸಿ 80ರ ಮಹಿಳೆ ಮತ್ತು ಅವರ ಮಗ 45ರ ಮಗ ಅವರಿಗೆ ಸೋಂಕು ದೃಢಪಟ್ಟಿದ್ದು, ಇವರೂ ರೋಗಿ ಸಂಖ್ಯೆ 432ರ ಸಂಪರ್ಕದಲ್ಲಿದ್ದರು.

ಇದೀಗ 8 ಕಂಟೈನ್ಮೆಂಟ್ ವಲಯಗಳನ್ನು ಮಾಡಲಾಗಿದೆ. ಅವು ಹೀಗಿವೆ. ಸಂಪ್ಯ – ಪುತ್ತೂರು. ತುಂಬೆ – ಬಂಟ್ವಾಳ, ತೊಕ್ಕೊಟ್ಟು-ಮಂಗಳೂರು, ಉಪ್ಪಿನಂಗಡಿ – ಪುತ್ತೂರು, ಬಿ.ಕಸ್ಬಾ ಬಂಟ್ವಾಳ –ಬಂಟ್ವಾಳ, ಫಸ್ಟ್ ನ್ಯೂರೊ ಆಸ್ಪತ್ರೆ – ಮಂಗಳೂರು, ನರಿಕೊಂಬು ಗ್ರಾಮದ ನಾಯಿಲ – ಬಂಟ್ವಾಳ, ಕಕ್ಕೆಬೆಟ್ಟು ಪದವು – ಮಂಗಳೂರು.

ವೆನ್ಲಾಕ್ ನಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯದ ಸ್ಥಿತಿ ಹೀಗಿದೆ.

  1. ರೋಗಿ ಸಂಖ್ಯೆ 409 ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ
  2. ರೋಗಿ ಸಂಖ್ಯೆ 507: 80 ವರ್ಷದ ಮಹಿಳೆ ಆರೋಗ್ಯ ಸ್ಥಿರ. ಇವರು ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವವಾಯುಪೀಡಿತರು.
  3. ಉಳಿದ ಐದು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts