2 ಸಾವಿರ ಬಡ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ ಅಕ್ಕಿ ವಿತರಣೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಸುಮಾರು ೨ ಸಾವಿರಕ್ಕೂ ಮಿಕ್ಕಿ ಬಡ ಕುಟುಂಬಗಳಿಗೆ ವೈಯಕ್ತಿಕ ನೆಲೆಯಲ್ಲಿ ಅಕ್ಕಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಒದಗಿಸುವ ಸಂಕಲ್ಪ ಮಾಡಿದ್ದು, ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರಕಿತು.

ಜಾಹೀರಾತು

ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿಯೊಂದರಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆಯ ಸಭೆ ನಡೆಸಿದ ಸಂದರ್ಭ ಯಾವುದೇ ಪಡಿತರ ಚೀಟಿ ಹೊಂದಿರದ ಬಡ ಕಟುಂಬಗಳ ಸಮಸ್ಯೆಯು ಶಾಸಕರ ಗಮನೆಕ್ಕೆ ಬಂದಿದ್ದು, ಕೂಡಲೇ ಶಾಸಕರು ಬಂಟ್ವಾಳ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಅವರನ್ನು ಸಂಪರ್ಕಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪಡಿತರ ಚೀಟಿ ಹೊಂದಿರ ಕುಟುಂಬಗಳ ಪಟ್ಟಿ ಮಾಡಿ ನೀಡುವಂತೆ ಸೂಚಿದರು. ಅದರಂತೆ2  ಸಾವಿರಕ್ಕೂ ಮಿಕ್ಕಿ ಬಡ ಕುಟುಂಬಗಳ ಪಟ್ಟಿ ಶಾಸಕರಿಗೆ ಸಲ್ಲಿಕೆಯಾಗಿದ್ದು, ಶಾಸಕರು ತಮ್ಮ ವೈಯಕ್ತಿಕ ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 2 ಸಾವಿರ ಮಿಕ್ಕಿ ಕುಟುಂಬಗಳಿಗೆ ಅಕ್ಕಿ ನೀಡುವ ಕಾರ್ಯಕ್ರಮಕ್ಕೆ ತಮ್ಮ ಕಚೇರಿಯಲ್ಲಿ ಸೋಮವಾರ ಚಾಲನೆ ನೀಡಿದರು.

ಬೂಡ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಜಿಪಂ ಸದಸ್ಯ ರವೀಂದ್ರ ಕಂಬಳಿ,  ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ, ಡೊಂಬಯ್ಯ ಅರಳ, ಉಪಾಧ್ಯಕ್ಷರಾದ ವಜ್ರನಾಥ ಕಲ್ಲಡ್ಕ, ಮತ್ತು ಉಮೇಶ್ ಅರಳ, ಕಾರ್ತಿಕ್ ಬಲ್ಲಾಳ್, ಸುದರ್ಶನ್ ಬಜ, ಪ್ರಮೋದ್ ಅಜ್ಚಿಬೆಟ್ಟು, ಶ್ರೀಕಾಂತ್ ಶೆಟ್ಟಿ ಸಜಿಪ , ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯಶವಂತ ನಗ್ರಿ, ಜಯರಾಮ್ ನಾಯ್ಕ್ ಕೊಳ್ನಾಡು, ಪ್ರಕಾಶ್ ಅಂಚನ್, ಸೀತಾರಾಮ ಪೂಜಾರಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "2 ಸಾವಿರ ಬಡ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ ಅಕ್ಕಿ ವಿತರಣೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*