ಜಿಲ್ಲಾ ಸುದ್ದಿ

ಹಾಲಿನ ಡೈರಿಯಲ್ಲಿ ಹಣ್ಣು, ತರಕಾರಿ ಮಾರಲು ಅವಕಾಶ

ಪ್ರಸಕ್ತ ಕೋವಿಡ್‍ನ ಸಂದಿಗ್ದ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಲು, ರೈತರು ಮತ್ತು ರೈತ ಸಂಘ ಸಂಸ್ಥೆಯವರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ನೇರ ಮಾರಾಟ ಮಾಡಲು ಕೆ.ಎಂ.ಎಫ್. ಮಳಿಗೆಗಳಲ್ಲಿ ಸ್ಥಳಾವಕಾಶ ಒದಗಿಸಿಕೊಡಲು ಕೆ.ಎಂ.ಎಫ್. ರವರು ಒಪ್ಪಿರುತ್ತಾರೆ. ರೈತರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತ ಮಳಿಗೆಗಳ ಹತ್ತಿರ ಮಾರಾಟ ಮಾಡಲು ಕೆ.ಎಂ.ಎಫ್. ಮತ್ತು ತೋಟಗಾರಿಕೆ ಇಲಾಖೆ ರವರ ಸಹಯೋಗದೊಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ರೈತರು ಮತ್ತು ರೈತ ಸಂಘ ಸಂಸ್ಥೆಯವರು ಅವಕಾಶದ ಅನುಕೂಲ ಪಡೆಯಬಹುದು.

ಜಾಹೀರಾತು

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ  ಸಂಖ್ಯೆ ಇಂತಿವೆ: ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಮಂಗಳೂರು – 9449258204, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 9448206393, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ – 9880993238, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ  – 9980250117, ಮಾರುಕಟ್ಟೆ ಅಧಿಕಾರಿ, ಕೆ.ಎಂ.ಎಫ್. ಎಂ. ರವಿ,  – 9448327317 ಇವರನ್ನು ಸಂಪರ್ಕಿಸಲು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ