ಜಿಲ್ಲಾ ಸುದ್ದಿ

ಬಂಟ್ವಾಳ ಪೇಟೆಯ ಮತ್ತೋರ್ವ ಮಹಿಳೆ ಕೊರೊನಾಗೆ ಬಲಿ

ಬಂಟ್ವಾಳ ಪೇಟೆಯ ಮೂರನೇ ಮಹಿಳೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬಂಟ್ವಾಳ ಕಸಬಾಕ್ಕೆ ಒಳಪಡುವ ಬಂಟ್ವಾಳ ಪೇಟೆ ನಿವಾಸಿ 67 ವರ್ಷದ ಮಹಿಳೆ ಸಾವನ್ನಪ್ಪಿದವರು.

ಜಾಹೀರಾತು

ಇವರು ಏ.18ರಂದು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಐಸಿಯು ವಿಭಾಗಕ್ಕೆ ಕೆಮ್ಮು, ಜ್ವರ, ಉಸಿರಾಟದ ತೊಂದರೆಯಿಂದ ದಾಖಲಾಗಿದ್ದರು. ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಯಿಂದ ವೆನ್ಲಾಕ್ ಗೆ ಅವರು ದಾಖಲಾಗಿದ್ದು, ಉಸಿರಾಟದ ತೊಂದರೆಯಿಂದ ಬಳಲುತ್ತಿರುವುದು ಕಂಡುಬಂದಿತ್ತು. ಅವರಿಗೆ ವೈರಲ್ ನ್ಯುಮೋನಿಯಾ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇವರು ಕ್ರೋನಿಕ್ ಓಬ್ ಸ್ಟ್ರಕ್ಟಿವ್ ಪಲ್ಮೊನರಿ ಡಿಸೀಸ್ ನಿಂದ ಹಾಗೂ ಮಧುಮೇಹದಿಂದಲೂ ಬಳಲುತ್ತಿದ್ದರು. ಇವರ ಗಂಟಲು ದ್ರವ ಮಾದರಿಯನ್ನು ಕಳುಹಿಸಿದಾಗ ಏ.20ರಂದು ವರದಿ ಪಾಸಿಟಿವ್ ಬಂದಿತ್ತು. ಐಸಿಯುನಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಏ.30ರಂದು ಸಂಜೆ 5.40ಕ್ಕೆ ಅವರು ನಿಧನ ಹೊಂದಿದ್ದಾರೆ ಎಂದು ವೆನ್ಲಾಕ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರೊಂದಿಗೆ ಅಕ್ಕಪಕ್ಕದ ಮನೆಯ ಮೂವರು ಕೊರೊನಾ ಹಿನ್ನೆಲೆಯಲ್ಲಿ ಸಾವನ್ನಪ್ಪಿದಂತಾಗಿದೆ. ಏ.18ರಂದು ಬಂಟ್ವಾಳದ ಅಕ್ಕಪಕ್ಕದ ಇಬ್ಬರು ಮಹಿಳೆಯರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ 50 ವರ್ಷದ ಮಹಿಳೇ ಏ.19ರಂದು ಮೃತಪಟ್ಟರೆ, ಇವರು ಏ.30ರಂದು ಮೃತಪಟ್ಟಿದ್ದಾರೆ. ಈ ನಡುವೆ ಏ.19ರಂದು ಮೃತ ಮಹಿಳೆಯ ಅತ್ತೆ ಮಂಗಳೂರಿನ ಫಸ್ಟ್ ನ್ಯೂರೊದಲ್ಲಿ ದಾಖಲಾಗಿದ್ದ ಸಂದರ್ಭ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಅವರು ಏ.23ರಂದು ಸಾವನ್ನಪ್ಪಿದ್ದರು. ಇಂದು ಮೃತಪಟ್ಟ ಮಹಿಳೆಯ ಮಗಳಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಅವರು ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

2 hours ago