ಬಂಟ್ವಾಳ

ರಾಯಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರಿಂದ ಕಿಟ್ ವಿತರಣೆ, ಟಾಸ್ಕ್ ಫೋರ್ಸ್ ಸಭೆ

ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಕೋವಿಡ್-19 ತಡೆಗಾಗಿ ರಚನೆಗೊಂಡ ಟಾಸ್ಕ್ ಫೋರ್ಸ್ ಸದಸ್ಯರ ಸಭೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಉಪಸ್ಥಿತಿಯಲ್ಲಿ ನಡೆಯಿತು.

ಜಾಹೀರಾತು

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಜಿಪಂ ಸದಸ್ಯ ತುಂಗಪ್ಪ ಬಂಗೇರ, ಇಒ ರಾಜಣ್ಣ, ಪಂಚಾಯಿತಿ ಅಧ್ಯಕ್ಷ ದಯಾನಂದ ಸಫಲ್ಯ, ಉಪಾಧ್ಯಕ್ಷೆ ಪುಷ್ಪಲತಾ ಎಸ್.ಆರ್, ಪಂಚಾಯತ್ ಸದಸ್ಯರಾದ ಹರೀಶ್ ಆಚಾರ್ಯ ರಾಯಿ, ಪದ್ಮನಾಭ ಗೌಡ, ರಾಘವ ಅಮೀನ್, ನಿರುಪಮಾ ಎಸ್. ಭಂಡಾರಿ, ಕುಸುಮಾ, ಜಗದೀಶ ಕೊಯ್ಲ, ಯಶೋಧಾ, ಪ್ರಮುಖರಾದ ಡೊಂಬಯ್ಯ ಬಿ.ಅರಳ, ಪರಮೇಶ್ವರ ಪೂಜಾರಿ, ಸಂತೋಷ್ ರಾಯಿಬೆಟ್ಟು, ರಶ್ಮಿತ್ ಶೆಟ್ಟಿ ಕೈತ್ರೋಡಿ, ದಿನೇಶ್ ಮೈಂದಬೆಟ್ಟು, ವಿಶ್ವನಾಥ ಗೌಡ ಬಿ, ಕಾರ್ಯದರ್ಶಿ ಭುವನೇಂದ್ರ, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ನಾನಾ ಇಲಾಖೆಗಳ ಸಿಬ್ಬಂದಿ ಇದ್ದರು. ಇದಕ್ಕೂ ಮುನ್ನ ಗ್ರಾಮದಲ್ಲಿನ 165 ಆಶಕ್ತ ಕುಟುಂಬಕ್ಕೆ ಕಿಟ್ ವಿತರಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.