ಕರ್ಪೆ ಸಮೀಪ ದೋಟ ಎಂಬಲ್ಲಿ ಅಣೆಕಟ್ಟು ಕಾಮಗಾರಿ ಪ್ರಗತಿ ವೀಕ್ಷಣೆ

ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ದೋಟ ಎಂಬಲ್ಲಿ ನಿರ್ಮಾಣವಾಗುತ್ತಿರುವ ಅಣೆಕಟ್ಟು ಸಹಿತ ಸೇತುವೆ ಕಾಮಗಾರಿಯನ್ನು ಮಳೆಗಾಲ ಆರಂಭಗೊಳ್ಳುವ ಮೊದಲೇ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ ಎಂಜಿನಿಯರುಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೂಚಿಸಿದ್ದಾರೆ.

ಜಾಹೀರಾತು

ಫಲ್ಗುಣಿ ನದಿಗೆ ಅಡ್ಡಲಾಗಿ ಪಶ್ಚಿಮ ವಾಹಿನಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಅಣೆಕಟ್ಟು ಇದಾಗಿದ್ದು, ಸಂಗಬೆಟ್ಟು ಗ್ರಾಪಂನಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಸಂದರ್ಭ ಅಣೆಕಟ್ಟು ಕಾಮಗಾರಿ ವಿಳಂಬದ ಕುರಿತು ಪ್ರಸ್ತಾಪ ಬಂದ ವೇಳೆ ಶಾಸಕರು ಅಣೆಕಟ್ಟು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. “ಕೊರೊನಾ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸುವಂತೆ ಶಾಸಕರು ಸೂಚಿಸಿದರು. ಈ ಕುರಿತು ಜಿಲ್ಲಾಧಿಕಾರಿ ಜೊತೆ ಚರ್ಚಿಸುವುದಾಗಿ ಅವರು ತಿಳಿಸಿದರು.

‘ಕಾಮಗಾರಿಗೆ  ಈ ಹಿಂದೆ ಮಂಜೂರು ಗೊಂಡ 16 ಕೋಟಿ ಅನುದಾನವನ್ನು ಊರವರ ಬೇಡಿಕೆಯ ಹಿನ್ನೆಲೆಯಲ್ಲಿ  32  ಕೋಟಿಗೆ ಹೆಚ್ಚಿಸಿ  ಸೇತುವೆ ಅಗಲೀಕರಣ ಮತ್ತು ಘನವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಬಂಟ್ವಾಳ ಮತ್ತು ಮಂಗಳೂರು ತಾಲೂಕು ಸಂಪರ್ಕದ ಅಣೆಕಟ್ಟು ಇದಾಗಿದ್ದು, ಎರಡೂ  ಬದಿಯ ರೈತರ ಬೇಡಿಕೆಯಂತೆ 20 ಕಿ.ಮೀ. ಉದ್ದಕ್ಕೆ ಕೃಷಿ ಭೂಮಿಗೆ ನೀರು ಹಾದು ಹೋಗಲು ಮತ್ತೆ 12 ಕೋಟಿ ರೂ ಅನುದಾನ ಮಂಜೂರುಗೊಳಿಸಲಾಗಿದ್ದು, ಕಾಮಗಾರಿ ತುರ್ತು ಮುಗಿಸುವ ಹಿನ್ನೆಲೆಯಲ್ಲಿ ತಜ್ಞರನ್ನು ಸಂಪರ್ಕಿಸಲು ಶಾಸಕರು ಸೂಚಿಸಿದರು. ಈ ಕಾಮಗಾರಿ ಪೂರ್ಣಗೊಂಡ ನಂತರ ಈ ಭಾಗದಲ್ಲಿ ನೀರಿನ ಸಮಸ್ಯೆ ಸುಧಾರಿಸಲಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ಕಡೆಯಿಂದ ಬಂಟ್ವಾಳದ ವಾಮದಪದವು ಸಿದ್ದಕಟ್ಟೆ ಮುಂತಾದ ಪ್ರದೇಶದ ಜನರಿಗೆ ಮಂಗಳೂರು ಸಂಪರ್ಕ.ಸುಗಮವಾಗಲಿದ್ದು

ಮಂಗಳೂರು ತಾಲೂಕಿನ ಕುಪ್ಪೆಪದವು, ಎಡಪದವು ಸೇರಿದಂತೆ ಬಹುತೇಕ ಜನರಿಗೆ ಈ ರಸ್ತೆಯ ಮೂಲಕ ಬಂಟ್ವಾಳ ಹಾಗೂ ಧರ್ಮಸ್ಥಳ  ಉಜಿರೆ ಹತ್ತಿರವಾಗಲಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೂ ಹತ್ತಿರವಾಗಲಿದೆ ಎಂದರು.

ಜಾಹೀರಾತು

ತಾಪಂ ಸದಸ್ಯ ಪ್ರಭಾಕರ ಪ್ರಭು, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ  ಇಂಜಿನಿಯರ್  ಕೃಷ್ಣ ಕುಮಾರ್, ಸಹಾಯಕ ಇಂಜಿನಿಯರ್ ಪ್ರಸನ್ನ , ಗುತ್ತಿಗೆದಾರರ ಇಂಜಿನಿಯರ್ ಪ್ರಿನ್ಸ್, ಸೈಟ್ ಮೆನೇಜರ್ ಮಂಜುನಾಥ್, ಪ್ರಮುಖರಾದ ಗಣೀಶ್ ರೈ ಮಾಣಿ, ಗ್ರಾಮದ ಪ್ರಮುಖರಾದ ತೇಜಸ್ ಮರ್ದೊಟ್ಟು, ನವೀನ ಪೂಜಾರಿ  ಹೊಸಹೊಕ್ಲು, ಶಾಸಕರ ಅಪ್ತ ಸಹಾಯಕರಾದ ದಿನೇಶ್, ಪವನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕರ್ಪೆ ಸಮೀಪ ದೋಟ ಎಂಬಲ್ಲಿ ಅಣೆಕಟ್ಟು ಕಾಮಗಾರಿ ಪ್ರಗತಿ ವೀಕ್ಷಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*