ವಾಮದಪದವು

ಕರ್ಪೆ ಸಮೀಪ ದೋಟ ಎಂಬಲ್ಲಿ ಅಣೆಕಟ್ಟು ಕಾಮಗಾರಿ ಪ್ರಗತಿ ವೀಕ್ಷಣೆ

ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ದೋಟ ಎಂಬಲ್ಲಿ ನಿರ್ಮಾಣವಾಗುತ್ತಿರುವ ಅಣೆಕಟ್ಟು ಸಹಿತ ಸೇತುವೆ ಕಾಮಗಾರಿಯನ್ನು ಮಳೆಗಾಲ ಆರಂಭಗೊಳ್ಳುವ ಮೊದಲೇ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ ಎಂಜಿನಿಯರುಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೂಚಿಸಿದ್ದಾರೆ.

ಜಾಹೀರಾತು

ಫಲ್ಗುಣಿ ನದಿಗೆ ಅಡ್ಡಲಾಗಿ ಪಶ್ಚಿಮ ವಾಹಿನಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಅಣೆಕಟ್ಟು ಇದಾಗಿದ್ದು, ಸಂಗಬೆಟ್ಟು ಗ್ರಾಪಂನಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಸಂದರ್ಭ ಅಣೆಕಟ್ಟು ಕಾಮಗಾರಿ ವಿಳಂಬದ ಕುರಿತು ಪ್ರಸ್ತಾಪ ಬಂದ ವೇಳೆ ಶಾಸಕರು ಅಣೆಕಟ್ಟು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. “ಕೊರೊನಾ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸುವಂತೆ ಶಾಸಕರು ಸೂಚಿಸಿದರು. ಈ ಕುರಿತು ಜಿಲ್ಲಾಧಿಕಾರಿ ಜೊತೆ ಚರ್ಚಿಸುವುದಾಗಿ ಅವರು ತಿಳಿಸಿದರು.

‘ಕಾಮಗಾರಿಗೆ  ಈ ಹಿಂದೆ ಮಂಜೂರು ಗೊಂಡ 16 ಕೋಟಿ ಅನುದಾನವನ್ನು ಊರವರ ಬೇಡಿಕೆಯ ಹಿನ್ನೆಲೆಯಲ್ಲಿ  32  ಕೋಟಿಗೆ ಹೆಚ್ಚಿಸಿ  ಸೇತುವೆ ಅಗಲೀಕರಣ ಮತ್ತು ಘನವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಬಂಟ್ವಾಳ ಮತ್ತು ಮಂಗಳೂರು ತಾಲೂಕು ಸಂಪರ್ಕದ ಅಣೆಕಟ್ಟು ಇದಾಗಿದ್ದು, ಎರಡೂ  ಬದಿಯ ರೈತರ ಬೇಡಿಕೆಯಂತೆ 20 ಕಿ.ಮೀ. ಉದ್ದಕ್ಕೆ ಕೃಷಿ ಭೂಮಿಗೆ ನೀರು ಹಾದು ಹೋಗಲು ಮತ್ತೆ 12 ಕೋಟಿ ರೂ ಅನುದಾನ ಮಂಜೂರುಗೊಳಿಸಲಾಗಿದ್ದು, ಕಾಮಗಾರಿ ತುರ್ತು ಮುಗಿಸುವ ಹಿನ್ನೆಲೆಯಲ್ಲಿ ತಜ್ಞರನ್ನು ಸಂಪರ್ಕಿಸಲು ಶಾಸಕರು ಸೂಚಿಸಿದರು. ಈ ಕಾಮಗಾರಿ ಪೂರ್ಣಗೊಂಡ ನಂತರ ಈ ಭಾಗದಲ್ಲಿ ನೀರಿನ ಸಮಸ್ಯೆ ಸುಧಾರಿಸಲಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ಕಡೆಯಿಂದ ಬಂಟ್ವಾಳದ ವಾಮದಪದವು ಸಿದ್ದಕಟ್ಟೆ ಮುಂತಾದ ಪ್ರದೇಶದ ಜನರಿಗೆ ಮಂಗಳೂರು ಸಂಪರ್ಕ.ಸುಗಮವಾಗಲಿದ್ದು

ಮಂಗಳೂರು ತಾಲೂಕಿನ ಕುಪ್ಪೆಪದವು, ಎಡಪದವು ಸೇರಿದಂತೆ ಬಹುತೇಕ ಜನರಿಗೆ ಈ ರಸ್ತೆಯ ಮೂಲಕ ಬಂಟ್ವಾಳ ಹಾಗೂ ಧರ್ಮಸ್ಥಳ  ಉಜಿರೆ ಹತ್ತಿರವಾಗಲಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೂ ಹತ್ತಿರವಾಗಲಿದೆ ಎಂದರು.

ತಾಪಂ ಸದಸ್ಯ ಪ್ರಭಾಕರ ಪ್ರಭು, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ  ಇಂಜಿನಿಯರ್  ಕೃಷ್ಣ ಕುಮಾರ್, ಸಹಾಯಕ ಇಂಜಿನಿಯರ್ ಪ್ರಸನ್ನ , ಗುತ್ತಿಗೆದಾರರ ಇಂಜಿನಿಯರ್ ಪ್ರಿನ್ಸ್, ಸೈಟ್ ಮೆನೇಜರ್ ಮಂಜುನಾಥ್, ಪ್ರಮುಖರಾದ ಗಣೀಶ್ ರೈ ಮಾಣಿ, ಗ್ರಾಮದ ಪ್ರಮುಖರಾದ ತೇಜಸ್ ಮರ್ದೊಟ್ಟು, ನವೀನ ಪೂಜಾರಿ  ಹೊಸಹೊಕ್ಲು, ಶಾಸಕರ ಅಪ್ತ ಸಹಾಯಕರಾದ ದಿನೇಶ್, ಪವನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.