ಬಂಟ್ವಾಳ

ಬಂಟ್ವಾಳಕ್ಕೆ ಮತ್ತೆ ಕೊರೊನಾ ಆಘಾತ, ಇಂದು ಮತ್ತೊಂದು ಪಾಸಿಟಿವ್ ಕೇಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ.1ರಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬಂಟ್ವಾಳದ ಒಬ್ಬರು ಮತ್ತು ಮಂಗಳೂರಿನ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ.

ಜಾಹೀರಾತು

ಬಂಟ್ವಾಳ ಎಸ್.ವಿ.ಎಸ್. ಶಾಲಾ ಓಣಿ ರಸ್ತೆ ನಿವಾಸಿ ಸುಮಾರು 70 ವರ್ಷದ ವ್ಯಕ್ತಿಯೋರ್ವರಿಗೆ ಸೋಂಕು ತಗಲಿರುವುದು ದೃಢಪಟ್ಟಿದ್ದು, ಇವರು ರೋಗಿ ಸಂಖ್ಯೆ 390ರ ದ್ವಿತೀಯ ಸಂಪರ್ಕ ಹೊಂದಿದವರು ಎಂದು ತಿಳಿದುಬಂದಿದೆ. ಇದರೊಂದಿಗೆ ಬಂಟ್ವಾಳ ಪೇಟೆಯಲ್ಲಿ ಒಟ್ಟು 5 ಮಂದಿಗೆ ಕೋವಿಡ್ ದೃಢಪಟ್ಟ ಪ್ರಕರಣ ವರದಿಯಾದಂತಾಗಿದ್ದು, ಇವರಲ್ಲಿ ಒಂದೇ ಮನೆಯ ಅತ್ತೆ, ಸೊಸೆ ಸಾವನ್ನಪ್ಪಿದರೆ, ಪಕ್ಕದ ಮನೆಯ ತಾಯಿ ಮೃತಪಟ್ಟಿದ್ದು, ಮಗಳು ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಸೋಂಕು ತಗಲಿದ ವ್ಯಕ್ತಿ ಏ.19ರಂದು ದೃಢಪಟ್ಟು ಮೃತರಾದ ಮಹಿಳೆಯ ದ್ವಿತೀಯ ಸಂಪರ್ಕದವರು ಎಂದು ಹೇಳಲಾಗುತ್ತಿದೆ. ಹತ್ತಿರದ ಬೀದಿಗಳಲ್ಲಿ ವಾಸಿಸುವ ಈ 70ರ ಹರೆಯದ ವೃದ್ಧರಿಗೆ ಸೋಂಕು ತಗಲಿದ ಬಳಿ ಬಂಟ್ವಾಳದಲ್ಲಿ ಆತಂಕ ಮನೆ ಮಾಡಿದೆ.

ಬಂಟ್ವಾಳ ತಾಲೂಕಿನಲ್ಲಿ ಒಟ್ಟು 8 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇವುಗಳ ಪೈಕಿ 3 ಸಾವನ್ನಪ್ಪಿದರೆ, 2 ಮಂದಿ ಗುಣಮುಖರಾಗಿದ್ದಾರೆ. 3 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದು,  ಅವರಲ್ಲಿ ಬಂಟ್ವಾಳ ಪೇಟೆಯ 2 ಮತ್ತು ನರಿಕೊಂಬು ನಾಯಿಲದ ಒಬ್ಬರು ಸೇರಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ